7 ಮಂದಿ ನೂತನ ಸಚಿವರು ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬೆನ್ನಲ್ಲೇ, ಅಬಕಾರಿ ಸಚಿವ ಹೆಚ್ ನಾಗೇಶ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯ ಮಂತ್ರಿಗಳ ಆದೇಶದ ಹಿನ್ನೆಲೆಯಲ್ಲಿ ಸಚಿವ ಎಚ್. ನಾಗೇಶ್
ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಸಿಎಂ ಯಡಿಯೂರಪ್ಪ ನೇತೃತ್ವದ ಸಂಪುಟದಿಂದ ಹೊರ ಬಂದಂತಾಗಿದೆ.
ನಾಗೇಶ್ ರಾಜೀನಾಮೆ ಕುರಿತಂತೆ ಸಿಎಂ ಯಡಿಯೂರಪ್ಪನವರೇ ಮಾಹಿತಿ ನೀಡಿದ್ದಾರೆ. ನಾಗೇಶ್ ಅವರನ್ನು ಮನವೊಲಿಸುವ ಕಸರತ್ತು ಮುಂದುವರೆದಿದೆ. ಒಂದು ಸ್ಥಾನವನ್ನು ಖಾಲಿ ಇಟ್ಟುಕೊಳ್ಳಲು ಪ್ರಯತ್ನ ನಡೆದಿದೆ ಎಂದು ಸಿಎಂ ಹೇಳಿದ್ದಾರೆ.