Main News

ಇಂದು ಮೈ ಎನ್ಇಪಿ ಅಭಿಯಾನಕ್ಕೆ ಚಾಲನೆ

ನ್ಯೂಸ್ ಸ್ನ್ಯಾಪ್
ಬೆಂಗಳೂರು, ಸೆಪ್ಟೆಂಬರ್ ೧೧
ಶುಕ್ರವಾರ

ಜುಲೈ ೨೯, ೨೦೨೦ರಂದು ಕೇಂದ್ರ ಸಚಿವ ಸಂಪುಟವು ಹೊಸ ಶಿಕ್ಷಣ ನೀತಿ ೨೦೨೦ ಅನ್ನು ಅನುಮೋದಿಸಿದ ನಂತರ ಇಂದು ಸಂಜೆ ೫ ಗಂಟೆಗೆ ಉಪ ಮುಖ್ಯಮಂತ್ರಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ‘ಮೈ ಎನ್ಇಪಿ’ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ತಜ್ಞರ ಪ್ರಕಾರ ಹೊಸ ಶಿಕ್ಷಣ ನೀತಿಯು ಸಮರ್ಪಕ ರೀತಿಯಲ್ಲಿ‌ ಜಾರಿಗೆ ಬರಲು ಕನಿಷ್ಠ ಹತ್ತು ವರ್ಷಗಳಾದರೂ ಬೇಕು. ಈ ಸಂದರ್ಭದಲ್ಲಿ ಹಂತ ಹಂತವಾಗಿ ಪ್ರತಿ ಆಯ್ದ ಶಾಲೆ, ಕಾಲೇಜುಗಳಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ಸಚಿವರು ಅಭಿಯಾನವನ್ನು ಪ್ರಾರಂಭಿಸುತ್ತಿದ್ದಾರೆ.

ಸಮಾರಂಭದಲ್ಲಿ ವಿಶ್ವ ವಿದ್ಯಾಲಯ ಅನುದಾನ ಆಯೋಗದ ಸದಸ್ಯರು, ಹೊಸ ಶಿಕ್ಷಣ ನೀತಿಯ ಕರಡು ಸಮಿತಿ ಸದಸ್ಯರೂ ಆಗಿದ್ದ ಎಮ್. ಕೆ. ಶ್ರೀಧರ್, ಬಯೋಕಾನ್ ಸಂಸ್ಥೆಯ ಮುಖ್ಯಸ್ಥರಾದ ಕಿರಣ್ ಮಜುಂದಾರ್ ಶಾ, ಬೆಂಗಳೂರು ವಿಶ್ವ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಆರ್. ವೇಣುಗೋಪಾಲ್ ಮತ್ತಿತರು ಭಾಗವಹಿಸಲಿದ್ದಾರೆ.

ಇಂದು ಬೆಳಿಗ್ಗೆ ೧೧ ಗಂಟೆಗೆ ಪ್ರಧಾನಿ ಮೋದಿಯವರು ‘೨೧ನೇ ಶತಮಾನದಲ್ಲಿನ ಶಾಲಾ ಶಿಕ್ಷಣ ಹಾಗೂ ಹೊಸ ಶಿಕ್ಷಣ ನೀತಿಯ ಕುರಿತು ಮಾತನಾಡಲಿದ್ದಾರೆ. ಶಿಕ್ಷಣ ಪರ್ವದ ಅಂಗವಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಆಯೋಜಿಸುತ್ತಿರುವ ಎರಡು ದಿನದ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024