Main News

ಫೂಟ್ ಮಸಾಜರ್​ನಲ್ಲಿ ಬಚ್ಚಿಟ್ಟಿದ್ದ 1.25 ಕೋಟಿ ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಕ್ಕೆ

ಬೆಂಗಳೂರು ನಗರದ ವಿದೇಶಿ ಅಂಚೆ ಕಚೇರಿಯ ಕಸ್ಟಮ್ಸ್ ಕಮಿಷನರೇಟ್ ಅಧಿಕಾರಿಗಳು ನಡೆಸಿದ ಕಾರ್ಯಚರಣೆಯಲ್ಲಿ ಅಕ್ರಮವಾಗಿ  ಎಂಡಿಎಂಎ ಮಾದಕ ದ್ರವ್ಯ  ಪತ್ತೆ ಮಾಡಿದ್ದಾರೆ.

ಫ್ರಾನ್ಸ್ ದೇಶದಿಂದ ಭಾರತಕ್ಕೆ ಕಳ್ಳಸಾಗಾಣಿಕೆಗೆ ಯತ್ನ ಮಾಡಲಾಗಿದೆ. ಫೂಟ್ ಮಸಾಜರ್​ನಲ್ಲಿ ಬಚ್ಟಿಟ್ಟು ಎಂ.ಡಿ.ಎಂ.ಎ ಮಾದಕ ದ್ರವ್ಯ  ಸಾಗಿಸುವ ಪ್ರಯತ್ನ ನಡೆದಿತ್ತು.

ವಿದೇಶಿ ಅಂಚೆ ಕಚೇರಿ ಕಸ್ಟಮ್ಸ್ ಕಮಿಷನರೇಟ್ ಅಧಿಕಾರಿಗಳು ಅನುಮಾನದ ಮೇಲೆ ಈ ಪಾರ್ಸಲ್ ತಪಾಸಣೆ ನಡೆಸಿದರು. ಫ್ರಾನ್ಸ್​ನಿಂದ ಬಂದಿದ್ದ ಈ ಪಾರ್ಸಲ್​ನಲ್ಲಿ 2.345 ಕೆಜಿ ತೂಕದ 1.25 ಕೋಟಿ ಮೌಲ್ಯದ  ಎಂಡಿಎಂಎ  ಮಾದಕ  ದ್ರವ್ಯ  ಪತ್ತೆಯಾಗಿದೆ. ಕಸ್ಟಮ್ಸ್ ಕಮಿಷನರೇಟ್ ಅಧಿಕಾರಿಗಳು  ಪ್ರಕರಣ  ದಾಖಲು ಮಾಡಿದ್ದಾರೆ.

ವಿದೇಶಗಳಿಂದ ಮೇಲಿಂದ ಮೇಲೆ ಡ್ರಗ್ಸ್ ಮಾರಾಟ ಮಾಡಲು ಯತ್ನಗಳು ನಡೆಯುತ್ತಿದ್ದು ಸರ್ಕಾರ ಮತ್ತಷ್ಟು ಕಾನೂನು ಬಿಗಿಗೊಳಿಸಿ, ತನಿಖೆ ಚುರುಕುಗೊಳಿಸುವ ಅವಶ್ಯಕತೆ ಹೆಚ್ಚಾಗಿದೆ. ಫ್ರಾನ್ಸ್, ರಷ್ಯಾ, ಜರ್ಮನಿ ಸೇರಿದಂತೆ ಹಲವು ದೇಶಗಳಿಂದ ಬರುವ ಡ್ರಗ್ಸ್ ಮಾರಾಟ ಜಾಲ ಹೆಚ್ಚುತ್ತಿರುವ ಆತಂಕ ಮನೆಮಾಡಿದೆ. ಇದರಿಂದ ಅಂತರ್ ರಾಷ್ಟ್ರೀಯ ಭದ್ರತೆ ಬಗ್ಗೆ ಸಾರ್ವಜನಿಕರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.

ಬೇರೆ ದೇಶಗಳಿಂದ ಡ್ರಗ್ಸ್ ಕಳಿಸುತ್ತಿರುವುದು ನಿಜ ಅಂದ ಮೇಲೆ ಇಲ್ಲಿ ಅದನ್ನ ಪಡೆದುಕೊಳ್ಳಲು ಇಲ್ಲಿ ಯಾರಾದ್ರೂ ಇರಲೇಬೇಕು. ಅಂತಹ ಕೈಗಳಿಗೆ ಕೋಳ ತೊಡಿಸಿ ಚೈನ್ ಲಿಂಕ್ ಕಟ್ ಮಾಡುವ ಕೆಲಸ ಆಗಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More

April 29, 2024

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024