ರಾಯಚೂರು: ಲಿಂಗಸುಗೂರಿನ ಕಂದಾಯ ಇಲಾಖೆಯ ಕೆಲ ಅಧಿಕಾರಿಗಳು ಮುಜರಾಯಿ ಇಲಾಖೆಯ ಹಣವನ್ನು ಲೂಟಿಸಿದ ಪ್ರಕರಣ ಬೆಳಕಿಗೆ ಬಂದಿದೆ. ದೇವಾಲಯದ ಅರ್ಚಕರಿಗೆ ಕೊಡಬೇಕಾದ ₹1,87,86,561 ಹಣವನ್ನು ಲೂಟಿ ಮಾಡಿ, ಅಧಿಕಾರಿಗಳು ತಮ್ಮ ಕುಟುಂಬ ಸದಸ್ಯರು ಮತ್ತು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿರುವುದು ಬಯಲಾಗಿದೆ.
ಕೆನರಾ ಬ್ಯಾಂಕ್ನ ಕೆಲ ಸಿಬ್ಬಂದಿಯ ಸಹಕಾರದಿಂದ ಅಕ್ರಮ ದಾಖಲಾತಿಗಳನ್ನು ಸೃಷ್ಟಿಸಿ, ಈ ಹಣವನ್ನು ಲಪಟಾಯಿಸಿದ ಆರೋಪ ಕೇಳಿಬಂದಿದೆ.
ಈ ಅವ್ಯವಹಾರದಲ್ಲಿ ಕಚೇರಿಯ ಐದು ಅಧಿಕಾರಿಗಳು ಸೇರಿಕೊಂಡಿದ್ದು, ದ್ವಿತೀಯ ದರ್ಜೆ ಸಹಾಯಕ (SDA) ಯಲ್ಲಪ್ಪನ ಪತ್ನಿ, ಮಗ, ಮಗಳು, ಟೆಕ್ಸಟೈಲ್ ಮತ್ತು ಕಿರಾಣಿ ಅಂಗಡಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ.
ಇದನ್ನು ಓದಿ -MUDA ಹಗರಣ: ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ – ಲೋಕಾಯುಕ್ತ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆ
ಈ ಹಗರಣ ಸಂಬಂಧ ಲಿಂಗಸುಗೂರು ತಹಶೀಲ್ದಾರ್ ಶಂಶಾಲಂ ಅವರ ದೂರಿನ ಮೇರೆಗೆ, ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ SDA ಯಲ್ಲಪ್ಪ ಮತ್ತು ಕೆನರಾ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು