ಕೊರೊನಾ ಲಸಿಕೆ ಅಭಿಯಾನದಡಿ, ಈವರೆಗೆ 1,87,211 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 7,94,500 ಡೋಸ್ ಕೋವಿಶೀಲ್ಡ್ ಲಸಿಕೆ ಬಂದಿದೆ. ಕೋವ್ಯಾಕ್ಸಿಕ್ ಲಸಿಕೆ ಮೊದಲಿಗೆ 20,000 ಡೋಸ್ ಬಂದಿತ್ತು. ನಂತರ ಮತ್ತೆ 1,46,240 ಡೋಸ್ ಬಂದಿದೆ. ಒಟ್ಟು 1,87,211 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದು ಅತಿ ಹೆಚ್ಚು ಎಂದು ತಿಳಿಸಿದರು.
ಲಸಿಕೆಯಿಂದ ಈವರೆಗೆ ಯಾವುದೇ ದೊಡ್ಡ ಮಟ್ಟದ ಅಡ್ಡ ಪರಿಣಾಮ ಆಗಿಲ್ಲ. ಇದು ಅತ್ಯಂತ ಸುರಕ್ಷಿತ ಲಸಿಕೆ. ಹೆಚ್ಚು ಜನರು ಇದನ್ನು ಪಡೆಯಬೇಕು. ಜನಸಾಮಾನ್ಯರಿಗೆ ನೈತಿಕ ಸ್ಥೈರ್ಯ ತುಂಬಲು ಎರಡನೇ ಹಂತದಲ್ಲಿ ಸಿಎಂ, ಮಂತ್ರಿಗಳಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ ಎಂದರು.
ರಾಜ್ಯದಲ್ಲಿ ಸುಮಾರು 500 ರಷ್ಟು ಜನಪ್ರಿಯ ವ್ಯಕ್ತಿಗಳಿಗೆ ಲಸಿಕೆ ನೀಡುವಂತೆ ಕ್ರಮ ವಹಿಸಲು ಪ್ರಧಾನಿಗಳಿಗೆ ಕೋರಲಾಗಿದೆ ಎಂದರು.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಒಬ್ಬರ ಬಳಿ ಇದ್ದರೆ ನಿರ್ವಹಣೆ ಸುಲಭ. ಕೋವಿಡ್ ಲಸಿಕೆ ಬಂದಿರುವ ಈ ಸಮಯದಲ್ಲಿ ಎರಡೂ ಇಲಾಖೆ ಸಮನ್ವಯದಿಂದ ಕೆಲಸ ಮಾಡಬೇಕು. ಯಾರಿಗೇ ಆದರೂ ಕೊಡಲಿ, ಆದರೆ ಒಬ್ಬರಿಗೇ ಖಾತೆ ನೀಡಲಿ. ಕೊರೊನಾ ತಾರ್ಕಿಕ ಅಂತ್ಯ ಕಾಣಲು ಇದು ಶಾಶ್ವತವಾಗಿ ಒಂದಾಗಬೇಕು. ಮುಂದೆ ಯಾವುದೇ ಸರ್ಕಾರ ಬಂದರೂ ಹೀಗೆಯೇ ಇರಬೇಕು ಎಂದರು.
ಮುಖ್ಯಮಂತ್ರಿಗಳಿಗೆ ಕಠಿಣ ಸವಾಲಿದೆ. ಲಭ್ಯವಿರುವ ಖಾತೆಯನ್ನು ಹಂಚುವುದು ಸಾಹಸದ ಕೆಲಸ. ಈಗ ನಮ್ಮ ಮುಂದೆ ಅತಿ ಹೆಚ್ಚು ಜನರಿಗೆ ಲಸಿಕೆ ನೀಡುವ ಸವಾಲಿದೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು