ಕೊರೊನಾ ಲಸಿಕೆ ಅಭಿಯಾನದಡಿ, ಈವರೆಗೆ 1,87,211 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 7,94,500 ಡೋಸ್ ಕೋವಿಶೀಲ್ಡ್ ಲಸಿಕೆ ಬಂದಿದೆ. ಕೋವ್ಯಾಕ್ಸಿಕ್ ಲಸಿಕೆ ಮೊದಲಿಗೆ 20,000 ಡೋಸ್ ಬಂದಿತ್ತು. ನಂತರ ಮತ್ತೆ 1,46,240 ಡೋಸ್ ಬಂದಿದೆ. ಒಟ್ಟು 1,87,211 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದು ಅತಿ ಹೆಚ್ಚು ಎಂದು ತಿಳಿಸಿದರು.
ಲಸಿಕೆಯಿಂದ ಈವರೆಗೆ ಯಾವುದೇ ದೊಡ್ಡ ಮಟ್ಟದ ಅಡ್ಡ ಪರಿಣಾಮ ಆಗಿಲ್ಲ. ಇದು ಅತ್ಯಂತ ಸುರಕ್ಷಿತ ಲಸಿಕೆ. ಹೆಚ್ಚು ಜನರು ಇದನ್ನು ಪಡೆಯಬೇಕು. ಜನಸಾಮಾನ್ಯರಿಗೆ ನೈತಿಕ ಸ್ಥೈರ್ಯ ತುಂಬಲು ಎರಡನೇ ಹಂತದಲ್ಲಿ ಸಿಎಂ, ಮಂತ್ರಿಗಳಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ ಎಂದರು.
ರಾಜ್ಯದಲ್ಲಿ ಸುಮಾರು 500 ರಷ್ಟು ಜನಪ್ರಿಯ ವ್ಯಕ್ತಿಗಳಿಗೆ ಲಸಿಕೆ ನೀಡುವಂತೆ ಕ್ರಮ ವಹಿಸಲು ಪ್ರಧಾನಿಗಳಿಗೆ ಕೋರಲಾಗಿದೆ ಎಂದರು.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಒಬ್ಬರ ಬಳಿ ಇದ್ದರೆ ನಿರ್ವಹಣೆ ಸುಲಭ. ಕೋವಿಡ್ ಲಸಿಕೆ ಬಂದಿರುವ ಈ ಸಮಯದಲ್ಲಿ ಎರಡೂ ಇಲಾಖೆ ಸಮನ್ವಯದಿಂದ ಕೆಲಸ ಮಾಡಬೇಕು. ಯಾರಿಗೇ ಆದರೂ ಕೊಡಲಿ, ಆದರೆ ಒಬ್ಬರಿಗೇ ಖಾತೆ ನೀಡಲಿ. ಕೊರೊನಾ ತಾರ್ಕಿಕ ಅಂತ್ಯ ಕಾಣಲು ಇದು ಶಾಶ್ವತವಾಗಿ ಒಂದಾಗಬೇಕು. ಮುಂದೆ ಯಾವುದೇ ಸರ್ಕಾರ ಬಂದರೂ ಹೀಗೆಯೇ ಇರಬೇಕು ಎಂದರು.
ಮುಖ್ಯಮಂತ್ರಿಗಳಿಗೆ ಕಠಿಣ ಸವಾಲಿದೆ. ಲಭ್ಯವಿರುವ ಖಾತೆಯನ್ನು ಹಂಚುವುದು ಸಾಹಸದ ಕೆಲಸ. ಈಗ ನಮ್ಮ ಮುಂದೆ ಅತಿ ಹೆಚ್ಚು ಜನರಿಗೆ ಲಸಿಕೆ ನೀಡುವ ಸವಾಲಿದೆ ಎಂದರು.
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment