ಸಂಪೂರ್ಣ ಮನೆ ಹಾನಿಗೆ 1 ಲಕ್ಷ ರು ಪರಿಹಾರ: ಸಿಎಂ ಘೋಷಣೆ

Team Newsnap
1 Min Read
BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ಭಾರೀ ಮಳೆಯಿಂದಾಗಿ ಸಂಪೂರ್ಣ ಮನೆ ಹಾನಿಯಾಗಿದ್ದರೆ 1 ಲಕ್ಷ ರು ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಲು ಸೂಚಿಸಲಾಗಿದೆ.

ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಭಾಗಶಃ ಬಿದ್ದ ಮನೆಗಳಿಗೂ ಪರಿಹಾರ ಕೊಡಲು ಸೂಚಿಸಿದ್ದೇವೆ. ಬೆಳೆ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಲಾಗುವುದು ಎಂದರು

ಇಂದು ಕೋಲಾರ ಜಿಲ್ಲೆ ಹಾಗೂ ಹೊಸಕೋಟೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಎಂದು ಮಾಹಿತಿ ನೀಡಿದರು

ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಬಂಧಪಟ್ಟ ಇಲಾಖೆಗಳ ಸಚಿವರು ಭೇಟಿ ನೀಡಬಹುದು. ಉಸ್ತುವಾರಿ ಸಚಿವರಿಗೆ ಆ ಅಧಿಕಾರ ನೀಡಿಲ್ಲ. ಮುಖ್ಯಮಂತ್ರಿಗಳು ಬೇಕಾದರೆ ಸ್ಥಳಗಳಿಗೆ ತೆರಳಿ ವೀಕ್ಷಣೆ ನಡೆಸಬಹುದು ಎಂಬ ಸೂಚನೆ ಇದೆ ಎಂದು ತಿಳಿಸಿದರು.

Share This Article
Leave a comment