Trending

ಹೊಟ್ಟೆ ನೋವು ಚಿಕಿತ್ಸೆಗೆ 10 ಕೋಟಿ ರು ಬಿಲ್! ಆದರೂ ಬದುಕಲಿಲ್ಲ ಆ ಮಹಿಳೆ – ದೂರು ದಾಖಲು

ಹೊಟ್ಟೆ ನೋವು ಅಂತ ಆಸ್ಪತ್ರೆಗೆ ದಾಖಲಾದ ಕೇರಳ ಮೂಲದ ಮಹಿಳೆಗೆ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಆದರೆ 7 ವರ್ಷಗಳ ಕಾಲ ಟ್ರೀಟ್‌ಮೆಂಟ್ ಕೊಟ್ಟರೂ ಆಕೆ ಬದುಕಲಿಲ್ಲ. ಇದೀಗ ಆಕೆಯ ಚಿಕಿತ್ಸೆ ವೆಚ್ಚ ಅಂತ ಆಸ್ಪತ್ರೆ ಹೇಳಿದ್ದು ಬರೋಬ್ಬರಿ 10 ಕೋಟಿ ರು ಬಿಲ್!ಈಗ ಆಸ್ಪತ್ರೆ ದೌರ್ಜನ್ಯದ ವಿರುದ್ಧ ಸಿಡಿದೆದ್ದಿದ್ದಾರೆ.

ಹೊಟ್ಟೆ ನೋವು ಅಂತ ಮಣಿಪಾಲ್ ಆಸ್ಪತ್ರೆ ಸೇರಿದ ಮಹಿಳೆ :

ಈ ಪ್ರಕರಣದ ಸಂತ್ರಸ್ಥೆ ಹೆಸರು ಪೂನಂ ರಾಣಾ(28 ). ಇವರು ಕೇರಳ ಮೂಲದವರು. ಪತಿ ರೇಜಿಶ್ ನಾಯರ್ . 2015ರ ಅಕ್ಟೋಬರ್ 3ರಂದು ನಸುಕಿನ ವೇಳೆ ಹೊಟ್ಟೆ ನೋವಿನಿಂದಾಗಿ ಪೂನಂ ರಾಣಾಳನ್ನು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನು ಓದಿ – DKSಗೆ ಮತ್ತೊಂದು ಸಂಕಷ್ಟ; ಡಿ.ಕೆ. ಶಿವಕುಮಾರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ED

ಚಿಕಿತ್ಸೆ ಫಲಿಸದೇ ಸಾವು – ವೈದ್ಯರ ಘೋಷಣೆ:

2015ರಿಂದಲೂ ಪೂನಂ ರಾಣಾಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆದರೆ ಇದೀಗ ಪೂನಂ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾಗಿ ವೈದ್ಯರು ಹೇಳಿದ್ದಾರೆ.

10 ಕೋಟಿ ಬಿಲ್ !

ಪೂನಂ ಪತಿ ರೇಜಿಶ್ ನಾಯರ್ ಅವರಿಗೆ ಆಸ್ಪತ್ರೆ ಸಿಬ್ಬಂದಿ 10 ಕೋಟಿ ರು ಬಿಲ್ ಆಗಿದೆ ಎಂದು ಹೇಳಿದ್ದಾರೆ

ಸಾಮಾನ್ಯ ಕುಟುಂಬಕ್ಕೆ ಸೇರಿದ ರೇಜಿಶ್, ಈಗಾಗಲೇ ಪತ್ನಿ ಚಿಕಿತ್ಸೆಗೆ ಅಂತ ಸಾಲ ಸೋಲ ಮಾಡಿ ಹಣ ಹೊಂದಿಸುತ್ತಾ ಇದ್ದರು. ಈಗಾಗಲೇ ಊರಿನಲ್ಲಿರುವ ಜಮೀನು ಮಾರಿ 2 ಕೋಟಿಯಷ್ಟು ವೆಚ್ಚ ಮಾಡಿದ್ದಾರೆ. ಇದೀಗ ಬಿಲ್ 10 ಕೋಟಿ ಆಗಿದೆ ಅಂತ ಆಸ್ಪತ್ರೆ ಹೇಳುತ್ತಿದೆ.

ಆಸ್ಪತ್ರೆ ವಿರುದ್ಧ ಪೂನಂ ಪತಿ ಆಕ್ರೋಶ :

ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ತನ್ನ ಪತ್ನಿ ಸಾವನ್ನಪ್ಪಿದ್ದಾಳೆ ಅಂತ ರೇಜಿಶ್ ನಾಯರ್ ಆರೋಪಿಸಿದ್ದಾರೆ. ಆಕೆಯ ದೇಹಕ್ಕೆ ನಿರಂತರವಾಗಿ ರಾಸಾಯನಿಕ ವಿಷ ಸೇರಿಸಲಾಗುತ್ತಿತ್ತು ಎನ್ನುವ ಬಗ್ಗೆಯೂ ಅವರು ಸಂದೇಹ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ

ಆಸ್ಪತ್ರೆಯಿಂದ ದೌರ್ಜನ್ಯವಾಗಿದೆ ಅಂತ ಆರೋಪಿಸಿ ಮೃತ ಪೂನಂ ರಾಣಾ ಪತಿ ರೇಜಿಶ್ ನಾಯರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ ಜೀವನ್ ಭಿಮಾನಗರ ಪೊಲೀಸ್ ಠಾಣೆಗೆ ಮಣಿಪಾಲ್ ಆಸ್ಪತ್ರೆ ವಿರುದ್ಧ ದೂರು ನೀಡಿದ್ದಾರೆ.

Team Newsnap
Leave a Comment

Recent Posts

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024

ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More

April 26, 2024