ಸೆಪ್ಟೆಂಬರ್ 12 ರಿಂದ ಹತ್ತು ದಿನ ವಿಧಾನಮಂಡಲ ಅಧಿವೇಶನ ನಡೆಯಲಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಧುಸ್ವಾಮಿ ಅವರು, ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು
ಬೀದರ್, ಹಾಸನ, ಚಾಮರಾಜನಗರ, ಕೊಡಗು, ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳಲ್ಲಿ ಸ್ನಾತಕೋತ್ತರ ವಿವಿ ಮಾಡಲು ತೀರ್ಮಾನ ಮಾಡಲಾಗಿದೆ.
ವೈಟ್ಫೀಲ್ಡ್ ರೈಲ್ವೇ ನಿಲ್ದಾಣದ ಮೇಲ್ಸೇತುವೆಗೆ ಅನುದಾನ ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಲಾಗಿದೆ.
ಲೋಕಾಯುಕ್ತ ಸಂಸ್ಥೆಯಲ್ಲಿ 10 ಖಾಲಿ ಸ್ಥಾನ ಇತ್ತು, ಅದರಲ್ಲಿ 7 ಸ್ಥಾನಗಳನ್ನು ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ನೇಮಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಲೋಕಾಯುಕ್ತ ವಕೀಲರು ಸೇರಿದಂತೆ ಇನ್ನಿತರ ಹುದ್ದೆ ನೇಮಕ ಆಗಲಿದೆ ಎಂದು ಸಂಪುಟ ಸಭೆಯ ನಿರ್ಣಯಗಳನ್ನು ವಿವರಿಸಿದರು.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!