ರಾತ್ರಿ ಬಂಕ್ಗೆ ನುಗ್ಗಿ 10 ಲಕ್ಷ ರೂ. ಮೌಲ್ಯದ ಪೆಟ್ರೋಲ್, ಡೀಸೆಲ್ ರಸ್ತೆಗೆ ಕಿಡಿಗೇಡಿಗಳ ಹರಿಬಿಟ್ಟ ಘಟನೆ ಪಾಂಡವಪುರ ತಾಲ್ಲೂಕಿನ ಬೇಬಿ ಗ್ರಾಮದ ಬಳಿಯ ಇಂಡಿಯನ್ ಪೆಟ್ರೋಲ್ ಬಂಕ್ನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬಂಕ್ನ ಸಿಬ್ಬಂದಿ, ರಾತ್ರಿ ಊಟಕ್ಕೆ ತೆರಳಿದ ಸಮಯದಲ್ಲಿ ಕಿಡಿಗೇಡಿಗಳು ಪೆಟ್ರೋಲ್ ಹಾಗೂ ಡೀಸೆಲ್ ಪಂಪ್ ಓಪನ್ ಮಾಡಿ ಹೊರಗೆ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕಳೆದ ಎರಡು ತಿಂಗಳ ಹಿಂದೆಯಷ್ಟೆ ಪೆಟ್ರೋಲ್ ಬಂಕ್ ಶುರುವಾಗಿದೆ ಎನ್ನಲಾಗಿದೆ. ಈ ನಡುವೆ ಎಂಟು ಸಾವಿರ ಲೀಟರ್ ಪೆಟ್ರೋಲ್ ಹಾಗೂ ಎರಡು ಸಾವಿರ ಲೀಟರ್ ಡೀಸೆಲ್ ಸಂಪೂರ್ಣ ನಾಶವಾಗಿದೆ. .
ಭಸ್ತಿರಂಗಪ್ಪ ಎಂಬುವವರಿಗೆ ಸೇರಿದ ಪೆಟ್ರೋಲ್ ಬಂಕ್ನಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ