ಶಿವಮೊಗ್ಗದಲ್ಲಿ ಇತ್ತೀಚಿಗೆ ಬರ್ಬರವಾಗಿ ಹತ್ಯೆಯಾಗಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಶನಿವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪತ್ನಿ ಜಯಲಕ್ಷ್ಮೀ, ಪುತ್ರ ಕಾಂತೇಶ್ ಭೇಟಿ ನೀಡಿ ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ತಮ್ಮ ಕುಟುಂಬದಿಂದ ಕುಟುಂಬಕ್ಕೆ 10 ಲಕ್ಷದ ಚೆಕ್ ನೀಡಿ ನೆರವಾದರು.
ಮೊನ್ನೆ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಜೊತೆಗೆ ಬಿಜೆಪಿ ಪಕ್ಷದ ಕಡೆಯಿಂದ 10 ಲಕ್ಷ ರೂಪಾಯಿಗಳ ಚೆಕ್ ಅನ್ನು ಹರ್ಷ ಪೋಷಕರಿಗೆ ಹಸ್ತಾಂತರ ಮಾಡಿದ್ದರು.
ಸ್ವಾಮೀಜಿಗಳಿಂದ 1 ಲಕ್ಷ ರು :
ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿ ಸ್ವಾಮೀಜಿಗಳ ನಿಯೋಗವು ಆರ್ಥಿಕ, ಧಾರ್ಮಿಕ, ಅಧ್ಯಾತ್ಮಿಕ ಆಶೀರ್ವಾದವನ್ನು ಮಾಡಿದ್ದೇವೆ. ಎಲ್ಲ ಧರ್ಮ-ಜಾತಿ ಜನರ ಅಂತರಂಗ ಮತ್ತು ಬಹಿರಂಗ ಮನಸ್ಸಿನಲ್ಲಿ ಶಾಂತಿ ನೆಲಸಬೇಕು. ಜನರು ಶಾಂತಿ ಸಹಬಾಳ್ವೆಯಿಂದ ಬದುಕಬೇಕಿದೆ ಎಂದರು. ಇದೇ ವೇಳೆ ಸ್ವಾಮೀಜಿಗಳಿಂದ ಹರ್ಷ ಕುಟುಂಬಕ್ಕೆ 1 ಲಕ್ಷ ಆರ್ಥಿಕ ನೆರವು ನೀಡಲಾಯಿತು.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ