ಮೂಲಂಗಿ ಬೀಜವನ್ನು ನೀರಿನಲ್ಲಿ ನೆನೆಸಿ ಅರೆದು ದಿನಕ್ಕೆ ಮೂರು ಬಾರಿ ಮುಖಕ್ಕೆ ಹಚ್ಚಿದರೆ ಮುಖದ ಮೇಲಿನ ಕಲೆಗಳು ಮಾಯವಾಗಿ ಮುಖದ ಕಾಂತಿ ವೃದ್ಧಿಸುತ್ತದೆ.
ಮೂಲಂಗಿ ಸಾಮಾನ್ಯವಾಗಿ ಬಿಳಿ ಬಣ್ಣದಲ್ಲಿದ್ದರೂ ಇತರ ಬಣ್ಣಗಳಲ್ಲಿಯೂ ದೊರಕುತ್ತದೆ. ಕೆಂಪು, ಹಳದಿ, ನೇರಳೆ, ಬಿಳಿ-ಕೆಂಪು ಮಿಶ್ರಿತ ಬಣ್ಣ, ಹಸಿರು ಮೊದಲಾದ ಬಣ್ಣಗಳಲ್ಲಿ ದೊರಕುತ್ತದೆ. Daikon ಎಂಬ ತಳಿಯ ಬಿಳಿ ಮೂಲಂಗಿ ಸಾಮಾನ್ಯವಾಗಿ ಉದ್ದ ಮತ್ತು ದೊಡ್ಡದಾಗಿದ್ದರೆ ಉಳಿದವು ಚಿಕ್ಕ ಬೀಟ್ರೂಟಿನ ಆಕಾರದಲ್ಲಿರುತ್ತವೆ. ಅಪರೂಪಕ್ಕೆ ಕಪ್ಪು ಬಣ್ಣಕ್ಕೆ ಅತಿ ಹತ್ತಿರವಾಗಿರುವ ಗಾಢನೀಲಿ ಬಣ್ಣದ ಮೂಲಂಗಿಗಳೂ ದೊರಕುತ್ತವೆ.
ಇದರ ರುಚಿ ಕೊಂಚವೇ ಖಾರವಾಗಿರುವ ಕಾರಣ ಹಲವರಿಗೆ ಇದು ಹಿಡಿಸುವುದಿಲ್ಲ. ಆದರೆ ಇದರಲ್ಲಿರುವ ಅದ್ಭುತವಾದ ಆರೋಗ್ಯಕರ ಗುಣಗಳು ಮಾತ್ರ ಈ ತರಕಾರಿಯನ್ನು ಅತಿ ಮಹತ್ವದ್ದಾಗಿಸುತ್ತದೆ.
ನೀವು ಪ್ರತಿದಿನ ಮೂಲಂಗಿ ರಸವನ್ನು ಕುಡಿಯುವ ಅಭ್ಯಾಸ ಹೊಂದಿದ್ದರೆ ಇದು ತ್ವಚೆಯ ಆರೋಗ್ಯವನ್ನು ಉತ್ತಮವಾಗಿ ಕಾಪಾಡುತ್ತದೆ ಹಾಗೂ ಅಗತ್ಯ ಪೋಷಕಾಂಶಗಳಾದ ವಿಟಮಿನ್ ಸಿ, ಸತು ಮತ್ತು ರಂಜಕಗಳನ್ನು ಒದಗಿಸುತ್ತದೆ. ಜೊತೆಗೆ ಇದು ಚರ್ಮ ಒಣಗುವಿಕೆ, ಮೊಡವೆ, ಕೀವುಗುಳ್ಳೆಗಳನ್ನು ಮತ್ತು ದದ್ದುಗಳು ಎದುರಾಗದೇ ಇರುವಂತೆ ಕಾಪಾಡುತ್ತದೆ.
ನಿಮ್ಮ ಮುಖವನ್ನು ಶುದ್ಧೀಕರಿಸಲು ನೀವು ಮೂಲಂಗಿಯನ್ನು ಅರೆದು ತಯಾರಿಸಿದ ಲೇಪವನ್ನೂ ತ್ವಚೆಗೆ ಹಚ್ಚಿಕೊಳ್ಳಬಹುದು. ಮತ್ತು ನೀವು ಇದನ್ನು ನಿಮ್ಮ ಕೂದಲಿಗೆ ಹಚ್ಚಿದರೆ, ಇದು ತಲೆಹೊಟ್ಟನ್ನು ನಿವಾರಿಸಲು, ಕೂದಲು ಉದುರುವುದನ್ನು ತಡೆಯಲು ನೆರವಾಗುತ್ತದೆ. ಅಷ್ಟೇ ಅಲ್ಲ, ಕೂದಲ ಬುಡಗಳಿಗೂ ಇಳಿದು ಕೂದಲ ಬುಡಗಳನ್ನು ದೃಢಗೊಳಿಸುವ ಮೂಲಕ ಕೂದಲ ಉದುರುವಿಕೆಯನ್ನು ತಡೆಯುತ್ತದೆ.
ಮೂಲಂಗಿಯಲ್ಲಿ ಅನೇಕ ಜೀವಸತ್ವಗಳು, ಖನಿಜಾಂಶಗಳು ಮತ್ತು ರೋಗ ನಿರೋಧಕ ಅಂಶಗಳು ಒಳಗೊಂಡಿದೆ. ಗಂಟಲು ನೋವು, ಪಿತ್ತದೋಷ ಅಸ್ವಸ್ಥತೆಗಳು ಮತ್ತು ಆಯುರ್ವೇದದಲ್ಲಿ ಉರಿಯೂತದಂತಹ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಮೂಲಂಗಿಯನ್ನು ಬಳಸಲಾಗುತ್ತದೆ. ನೂರು ಗ್ರಾಂ ಮೂಲಂಗಿಯಲ್ಲಿ ಈ ಕೆಳಗಿನಂತೆ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ.
100 ಗ್ರಾಂ ಮೂಲಂಗಿಯಲ್ಲಿರುವ ಪೋಷಕಾಂಶಗಳು
ಮೂಲಂಗಿಯನ್ನ ಸಾಂಬಾರ್, ಚಟ್ನಿ, ಪರೋಟ, ದೋಸೆ,ಹೀಗೆ ನಾನಾ ವಿಧದ ಅಡುಗೆಯಲ್ಲಿ ಬಳಸುತ್ತಾರೆ,
ಮೂಲಂಗಿ ಮೊಸರು ಸಾಸುವೆ ಮಾಡುವ ವಿಧಾನ:
ಮೂಲಂಗಿಯನ್ನು ತೊಳೆದು ಒಂದು ಪಾತ್ರೆಗೆ ತುರಿದುಕೊಳ್ಳಿ, ಅದಕ್ಕೆ ಮೊಸರು ,ಉಪ್ಪು ಹಾಕಿ.ಮಿಕ್ಸ್ ಮಾಡಿ ನಂತರ ಸಾಸುವೆ ಕಡ್ಲೆಬೇಳೆ ಕರಿಬೇವು ಹಾಕಿ ಒಗ್ಗರಣೆ ಕೊಡಿ.
ಮೂಲಂಗಿ ಮೊಸರು ಸಾಸುವೆ ರೆಡಿ.
ಮೂಲಂಗಿ ಹಿಂದೆ ಎಲೆಗಳು ಇದ್ದರು ಸಹ ಅವುಗಳನ್ನು ತೆಗೆದು ಹಾಕಿ ಕೇವಲ ಮೂಲಂಗಿ ಮಾತ್ರ ಬಳಕೆ ಮಾಡುತ್ತೇವೆ. ಆದರೆ ನಿಜ ಹೇಳಬೇಕು ಎಂದರೆ ಮೂಲಂಗಿಯಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳು ಮತ್ತು ಆರೋಗ್ಯ ಪ್ರಯೋಜನಗಳು ಮೂಲಂಗಿ ಎಲೆಗಳಲ್ಲಿ ಕೂಡ ಸಿಗುತ್ತವೆ.
ಒಂದು ಕಟ್ ಮೂಲಂಗಿ ಎಲೆಗಳನ್ನು ತೊಳೆದು ಸಣ್ಣದಾಗಿ ಕಟ್ ಮಾಡಿ ಒಂದು ಪಾತ್ರೆಗೆ ಹಾಕಿ ಅದಕ್ಕೆ ಸಣ್ಣದಾಗಿ ಹೆಚ್ಚಿದ 1 ಈರುಳ್ಳಿ, ಕಾಯಿತುರಿ 1 ಚಮಚ, ಉಪ್ಪು ಹಾಕಿ,ಪಚಡಿ ರೆಡಿ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment