Main News

ಕೇರಳದಲ್ಲಿ ಭಾರೀ ಮಳೆ : 14 ವರ್ಷಗಳ ನಂತರ ಮೇ ನಲ್ಲೂ ಮಂಡ್ಯದ KRS ನಲ್ಲಿ 100 ಅಡಿ ನೀರು

ರಾಜ್ಯದ ಜೀವ ನದಿ ಕಾವೇರಿ ಮಾತೆ ಈ ವರ್ಷವೂ ಸಂಮೃದ್ದಿಯಾಗಿ ಹರಿಯಲಿದೆ . ಕೆಆರ್‌ಎಸ್ (KRS) ಜಲಾಶಯದಲ್ಲಿ ಈಗ 100 ಅಡಿ ನೀರಿದೆ. ಮೇ ತಿಂಗಳಲ್ಲಿ ಕೆಆರ್‌ಎಸ್ 100 ಅಡಿ ತಲುಪಿರುವುದು 14 ವರ್ಷಗಳಲ್ಲೇ ಇದೇ ಮೊದಲು.

1) 2017ರ ಮೇ ತಿಂಗಳಲ್ಲಿ ಕೆಆರ್‌ಎಸ್‍ನಲ್ಲಿ ನೀರಿನ ಮಟ್ಟ 70.03 ಅಡಿ ಇತ್ತು.

2) 2018ರಲ್ಲಿ 70.13 ಅಡಿ, 2019ರಲ್ಲಿ 82.05 ಅಡಿ, 2020ರಲ್ಲಿ 96.28 ಅಡಿ, 2021ರಲ್ಲಿ 88.50 ಅಡಿ ನೀರಿತ್ತು. ಸದ್ಯ ನೀರಿನ ಮಟ್ಟ 100.2 ಅಡಿ ಇದೆ.

3) ಒಳಹರಿವಿನ ಪ್ರಮಾಣ 1171 ಕ್ಯೂಸೆಕ್ ಇದ್ದು, ಹೊರಹರಿವಿನ ಪ್ರಮಾಣ 1061 ಕ್ಯೂಸೆಕ್ ಇದೆ. ಡ್ಯಾಂನಲ್ಲೀಗ 22.825 ಟಿಎಂಸಿ ನೀರು ಇದೆ. 

ಇದನ್ನು ಓದಿ :ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಹಿಂದೂಗಳಿಗೆ ಬಿಟ್ಟು ಕೊಡಿ – ಡಿಸಿ ಗೆ ಮನವಿ

ಕೇರಳದಲ್ಲಿ ಭಾರೀ ಮಳೆ:

ಅಸಾನಿ ಚಂಡಮಾರುತ ದುರ್ಬಲವಾಗಿ, ಆಂಧ್ರದಲ್ಲಿ ಮೇಲ್ಮೇ ಸುಳಿಗಾಳಿ ಶುರುವಾಗಿದೆ. ಇದರ ಜೊತೆಗೆ ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತ ಪ್ರಬಲವಾಗಿದೆ. ಪರಿಣಾಮ ಮುಂಗಾರಿಗೂ ಮೊದಲೇ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ.

ಎರ್ನಾಕುಲಂ, ಇಡುಕ್ಕಿ, ತ್ರಿಶ್ಯೂರು, ಕೊಯಿಕ್ಕೋಡ್, ಕಣ್ಣೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇತ್ತ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಆಗಲಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಬೆಂಗಳೂರಲ್ಲಿ ಕೂಲ್ ಕೂಲ್ ವಾತಾವರಣ ಇದ್ದು, ಇನ್ನೂ ಒಂದು ವಾರ ಇದೇ ರೀತಿಯ ವಾತಾವರಣ ಇರಲಿದೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024