ಚಿತ್ರರಂಗದ ನಿರ್ಮಾಪಕರು, ಕಲಾವಿದರು, ಕಾರ್ಮಿಕರ ಹಿತದೃಷ್ಟಿ ಯಿಂದ ನಾಲ್ಕು ವಾರಗಳವರೆಗೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಶೇ 100 ರಷ್ಟು ಆಸನ ಭರ್ತಿಗೆ ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ವಿಧಾನಸೌಧದಲ್ಲಿ ಹಿರಿಯ ನಟರು, ಫಿಲಂ ಚೇಂಬರ್ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ಮೇರೆಗೆ ಸಭೆ ನಡೆದಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆ ಮೇರೆಗೆ ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆಯು ಕೋವಿಡ್ ನಿಯಂತ್ರಿಸಲು ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ಮಾತ್ರ ಆಸನ ಭರ್ತಿ ಮಾಡಬೇಕು ಎಂದು ಮಾರ್ಗಸೂಚಿ ಹೊರಡಿಸಿತ್ತು.
ಕೇಂದ್ರ ಸರ್ಕಾರವು ಶೇ.100 ರಷ್ಟು ಭರ್ತಿ ಮಾಡಲು ಅವಕಾಶ ನೀಡಿದ್ದರೂ, ಕೋವಿಡ್ ಹಿನ್ನೆಲೆಯಲ್ಲಿ ಆಯಾ ರಾಜ್ಯ ಸರ್ಕಾರಗಳು ನಿರ್ಧಾರ ಕೈಗೊಳ್ಳ ಬಹುದು ಎಂದು ತಿಳಿಸಿತ್ತು. ಅದರಂತೆ ಮಾರ್ಗಸೂಚಿ ರೂಪಿಸಲಾಗಿತ್ತು ಎಂದು ವಿವರಿಸಿದರು.
ಆರೋಗ್ಯ ಇಲಾಖೆಯ ಈ ಮಾರ್ಗ ಸೂಚಿಯನ್ನು ಚಲನಚಿತ್ರ ರಂಗದವರು ವಿರೋಧಿಸಿದ್ದಾರೆ. ಕಾರ್ಮಿಕರು, ನಿರ್ಮಾಪಕರ ಹಿತದೃಷ್ಟಿಯಿಂದ ಹಾಗೂ ಚಿತ್ರರಂಗದ ಪರಿಸ್ಥಿತಿ ಶೋಚನೀಯ ವಾಗಿರುವುದರಿಂದ ನಿರ್ಧಾರ ಬದಲಿಸಬೇಕು ಎಂದು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ನಮ್ಮೊಂದಿಗೆ ಇರಬೇಕು ಎಂದು ಕೂಡ ಚಿತ್ರರಂಗದವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ ಎಂದು ತಿಳಿಸಿದರು.
ನಾಳೆ ಚಿತ್ರ ಮಂದಿರ ಮಾಲೀಕರಿಗೆ ಕಠಿಣ ಮಾರ್ಗಸೂಚಿ :
ಈ ಬಗ್ಗೆ ಚರ್ಚೆ ನಡೆದಿದೆ. ಮುಖ್ಯಮಂತ್ರಿ ಗಳ ಸೂಚನೆಯಂತೆ ನಾಲ್ಕು ವಾರಗಳ ವರೆಗೆ ಶೇ 100 ರಷ್ಟು ಚಿತ್ರಮಂದಿರ ಗಳಲ್ಲಿ ಆಸನ ಭರ್ತಿ ಮಾಡಲು ಅವಕಾಶ ನೀಡಲಾಗಿದೆ. ಆದರೆ ಇದಕ್ಕೆ ಕಠಿಣವಾದ ಮಾರ್ಗಸೂಚಿ ರೂಪಿಸಲಿದ್ದೇವೆ, ನಾಳೆಯೇ ಅದನ್ನೂ ಬಿಡುಗಡೆ ಮಾಡಲಾಗುವುದು. ಇದನ್ನು ಚಿತ್ರಮಂದಿರಗಳ ಮಾಲೀಕರು ಅಳವಡಿಸಿಕೊಳ್ಳಬೇಕು. ಜನರು ಕೂಡ ಯಥಾವತ್ತಾಗಿ ಪಾಲಿಸಬೇಕು. ನಾಲ್ಕು ವಾರಗಳಲ್ಲಿ ಪ್ರೇಕ್ಷಕರಿಗೆ ಸೋಂಕು ತಗುಲುವ ಅಥವಾ ಕೋವಿಡ್ ಸೋಂಕು ಹೆಚ್ಚಿದ ಪ್ರಕರಣ ಕಂಡುಬಂದರೆ, ಮತ್ತೆ ನಿರ್ಧಾರ ಬದಲಿಸಿಕೊಳ್ಳುವ ಅನಿವಾರ್ಯ ಸ್ಥಿತಿ ಬರಲಿದೆ ಎಂದು ಸ್ಪಷ್ಟಪಡಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್, ನಟ ಶಿವರಾಜ್ ಕುಮಾರ್ ಉಪಸ್ಥಿತರಿದ್ದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment