ನಾಳೆ ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯದ ವರದಿ ಮಾಡಲು ಸಿದ್ದತೆ ಮಾಡಿಕೊಂಡಿದ್ದ 12 ಮಂದಿ ಪತ್ರಕರ್ತರಿಗೆ ಕರೋನಾ ಪಾಸಿಟಿವ್ ಬಂದಿದೆ.
ಮತ ಎಣಿಕೆ ಕಾರ್ಯಕ್ಕಾಗಿ ಪಾಸ್ ಪಡೆಯುವ ಉದ್ದೇಶದಿಂದ ಪತ್ರಕರ್ತರು ಸಹ ಕರೋನಾ ವರದಿ ಪಡೆಯಬೇಕಿತ್ತು,
ಈ ಕಾರಣದಿಂದ 70 ಮಂದಿ ಪತ್ರಕರ್ತರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು,ಇದರಲ್ಲಿ 12 ಮಂದಿಗೆ ಕರೋನ ಪಾಸಿಟಿವ್ ಬಂದಿದೆ 11 ಮಂದಿಗೆ ಯಾವುದೇ ರೋಗದ ಲಕ್ಷಣಗಳಿಲ್ಲ,ಹೀಗಾಗಿ ಜಿಲ್ಲಾಡಳಿತ ಕರೋನಾ ಭಾದಿಸಿರುವ ಪತ್ರಕರ್ತರು ಹೋಮ್ ಐಸುಲೇಷನ್ ಇರುವಂತೆ ಸಲಹೆ ಕೊಟ್ಟರು.
ಬೆಳಗಾವಿ ಪತ್ರಕರ್ತರ ಚಿಕಿತ್ಸಾ ಸೌಲಭ್ಯಕ್ಕೆ ಡಿಸಿಎಂ ಸವದಿ ಸೂಚನೆ :
ಬೆಳಗಾವಿ ಜಿಲ್ಲೆಯಲ್ಲಿ 12 ಮಂದಿ ಪತ್ರಕರ್ತರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರಿಗೆ ಅಗತ್ಯವಾದ ಚಿಕಿತ್ಸಾ ಸೌಲಭ್ಯಗಳನ್ನು ಮತ್ತು ಔಷಧೋಪಚಾರಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾಗಿರುವ ಶ್ರೀ ಅಂಜುಂ ಪರ್ವೇಜ್ ಅವರಿಗೆ ಖುದ್ದಾಗಿ ಮಾತನಾಡಿ ಸೂಚನೆ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ