ಎರಡು ಪ್ರತ್ಯೇಕ ಬ್ಯಾಂಕ್ ವಂಚನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯದ ಏಳು ಕಡೆ ಕಳೆಧ ರಾತ್ರಿ ಸಿಬಿಐ ದಾಳಿ ಮಾಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಬ್ಯಾಂಕ್ ಆಫ್ ಬರೋಡ ಗೆ ಸುಮಾರು 129 ಕೋಟಿ ರುಗಳಷ್ಟು ವಂಚನೆ ಮಾಡಿದ ಸಂಸ್ಥೆಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
ಸ್ಟೇಟ್ಸ್ ಬ್ಯಾಂಕ್ ಆಫ್ ಇಂಡಿಯಾ ಗೆ 71.88 ಕೋಟಿ ರೂಪಾಯಿ ಗಳನ್ನು ವಂಚಿಸಿರುವ ಸಯಾನಾ ಕಲಸ್೯ ಪ್ರೈವೇಟ್ ಲಿಮಿಟೆಡ್ ಕಚೇರಿ ಮತ್ತು ವಸತಿ ಸಮುಚ್ಚಯ ಗಳ ಅಹಮದಾಬಾದ್ ಹಾಗೂ ಗುಜರಾತ್ ನ 4 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ.
ಎಸ್ ಬಿಐ ಡಿಸೆಂಬರ್ 7 ರಂದು ಸಿಬಿಐ ಗೆ ದೂರಿನ ಅನ್ವಯ ಈ ದಾಳಿ ನಡೆದಿದೆ.
ಮತ್ತೊಂದು ಪ್ರಕರಣದಲ್ಲಿ ಬ್ಯಾಂಕ್ ಆಫ್ ಬರೋಡ ಡಿ. 2 ರಂದು ನೀಡಿದ್ದ ದೂರಿನಂತೆ 57. 28 ಕೋಟಿ ರೂಪಾಯಿಗಳ ವಂಚನೆಗೆ ಸಂಬಂಧ ಅಹಮದಾಬಾದ್, ಮುಂಬಯಿ ಹಾಗೂ ಬೆಂಗಳೂರಿನ ಮೂರು ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ.
ಟೆಕ್ನೋವಾ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಹ್ಸಾನ್ ಹಸನ್ ದರ್ವೇಶ್ , ಕಂಪನಿ ನಿರ್ದೇಶಕ ತಲೀಬ್ ಹಸನ್ ದರ್ವೇಶ್ ಮತ್ತು ಅಬ್ದುಲ್ ಹಬೀಬ್ ಅವರುಗಳು ಸೇರಿಕೊಂಡು ಬ್ಯಾಂಕ್ ಗೆ 57. 28 ಕೋಟಿ ರೂಪಾಯಿ ಗಳನ್ನು ವಂಚನೆ ಮಾಡಿದ್ದಾರೆಂದು ದೂರು ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ