ಎರಡು ಪ್ರತ್ಯೇಕ ಬ್ಯಾಂಕ್ ವಂಚನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯದ ಏಳು ಕಡೆ ಕಳೆಧ ರಾತ್ರಿ ಸಿಬಿಐ ದಾಳಿ ಮಾಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಬ್ಯಾಂಕ್ ಆಫ್ ಬರೋಡ ಗೆ ಸುಮಾರು 129 ಕೋಟಿ ರುಗಳಷ್ಟು ವಂಚನೆ ಮಾಡಿದ ಸಂಸ್ಥೆಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
ಸ್ಟೇಟ್ಸ್ ಬ್ಯಾಂಕ್ ಆಫ್ ಇಂಡಿಯಾ ಗೆ 71.88 ಕೋಟಿ ರೂಪಾಯಿ ಗಳನ್ನು ವಂಚಿಸಿರುವ ಸಯಾನಾ ಕಲಸ್೯ ಪ್ರೈವೇಟ್ ಲಿಮಿಟೆಡ್ ಕಚೇರಿ ಮತ್ತು ವಸತಿ ಸಮುಚ್ಚಯ ಗಳ ಅಹಮದಾಬಾದ್ ಹಾಗೂ ಗುಜರಾತ್ ನ 4 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ.
ಎಸ್ ಬಿಐ ಡಿಸೆಂಬರ್ 7 ರಂದು ಸಿಬಿಐ ಗೆ ದೂರಿನ ಅನ್ವಯ ಈ ದಾಳಿ ನಡೆದಿದೆ.
ಮತ್ತೊಂದು ಪ್ರಕರಣದಲ್ಲಿ ಬ್ಯಾಂಕ್ ಆಫ್ ಬರೋಡ ಡಿ. 2 ರಂದು ನೀಡಿದ್ದ ದೂರಿನಂತೆ 57. 28 ಕೋಟಿ ರೂಪಾಯಿಗಳ ವಂಚನೆಗೆ ಸಂಬಂಧ ಅಹಮದಾಬಾದ್, ಮುಂಬಯಿ ಹಾಗೂ ಬೆಂಗಳೂರಿನ ಮೂರು ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ.
ಟೆಕ್ನೋವಾ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಹ್ಸಾನ್ ಹಸನ್ ದರ್ವೇಶ್ , ಕಂಪನಿ ನಿರ್ದೇಶಕ ತಲೀಬ್ ಹಸನ್ ದರ್ವೇಶ್ ಮತ್ತು ಅಬ್ದುಲ್ ಹಬೀಬ್ ಅವರುಗಳು ಸೇರಿಕೊಂಡು ಬ್ಯಾಂಕ್ ಗೆ 57. 28 ಕೋಟಿ ರೂಪಾಯಿ ಗಳನ್ನು ವಂಚನೆ ಮಾಡಿದ್ದಾರೆಂದು ದೂರು ದಾಖಲಾಗಿದೆ.
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ದರ ಹೆಚ್ಚಿಸಿದ್ದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು… Read More
ನವದೆಹಲಿ ,ಜೂನ್ 16 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,900 ರೂಪಾಯಿ ದಾಖಲಾಗಿದೆ. 24… Read More
ಮೈಸೂರು : ಸೋಲಿಗೆ ಹತಾಶರಾಗಬೇಡಿ. ದೃಢ ಸಂಕಲ್ಪ ಮಾಡಿ ಮುನ್ನುಗಿದರೆ ಗೆಲುವು ಸುಲಭ ಎಂದು ಮೈಸೂರು ವಿಭಾಗದ ಪ್ರವಾಸೋಧ್ಯಮ ಇಲಾಖೆಯ… Read More
ಬೆಂಗಳೂರು : ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ರಾಜ್ಯ ಸರ್ಕಾರ ಜನತೆಗೆ ಬಹು ದೊಡ್ಡ ಶಾಕ್ ನೀಡಿದೆ. ಪೆಟ್ರೋಲ್,… Read More
ಮೈಸೂರು: ರಾಜ್ಯದಲ್ಲಿ ಶೀಘ್ರದಲ್ಲೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರ… Read More
ಬೆಂಗಳೂರು : ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ… Read More
This website uses cookies.
Leave a Comment