ಭಾರತ ಹಾಗೂ ಪ್ರವಾಸಿ ಶ್ರೀಲಂಕಾ ನಡುವಿನ ಎರಡನೇ ಟಿ-20 ಪಂದ್ಯದಲ್ಲಿ, ತಲೆಗೆ ಚೆಂಡು ಬಡಿದು ಗಾಯಗೊಂಡಿದ್ದ ಟೀಂ ಇಂಡಿಯಾದ ಆರಂಭಿಕ ಆಟಗಾರ ಇಶಾನ್ ಕಿಶಾನ್ ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದೆ
ಆರಂಭಿಕ ಅಟಗಾರ ಇಶಾನ್ ಕಿಶನ್ಗೆ ಪವರ್ ಪ್ಲೇನ 3ಮೇ ಓವರ್ನಲ್ಲಿ ಬೌಲಿಂಗ್ಗೆ ನಿಂತಿದ್ದ, ಶ್ರೀಲಂಕಾ ವೇಗಿ ಲಹಿರು ಕುಮಾರ್ 146 ಕಿಮೀ ಸ್ಪೀಡ್ನಲ್ಲಿದ್ದ ಎಸೆದ ಡೆಡ್ಲಿ ಬೌನ್ಸ್ರನ್ನು ಇಶಾನ್ ಹಿಂದಕ್ಕೆ ಬಾರಿಸಲು ಯತ್ನಿಸಿದ್ದಾರೆ.
ಆದರೆ ಚೆಂಡು ಬ್ಯಾಟ್ಗೆ ತಗುಲದ ಕಾರಣ ತಲೆಗೆ ಬಿದ್ದಿದೆ. ಈ ವೇಳೆ ನಿತ್ರಾಣಗೊಂಡ ಅವರು ಮೈದಾನದಲ್ಲೇ ಕುಳಿತುಕೊಳ್ಳುತ್ತಾರೆ.
ಈ ವೇಳೆ ಮೈದಾನಕ್ಕೆ ಆಗಮಿಸಿದ್ದ ಫಿಸಿಯೋ ಇಶಾನ್ಗೆ ಲಘು ಆರೈಕೆ ಮಾಡಿ ತೆರಳಿದ್ದರು.
ನಂತರ ಬ್ಯಾಟ್ ಹಿಡಿದು ನಿಂತ ಕಿಶಾನ್ 5ನೇ ಓವರ್ನಲ್ಲಿ ಔಟ್ ಆಗಿ ಪೆವಿಲಿಯನ್ ಸೇರಿಕೊಂಡರು. ಇನ್ನು ಮ್ಯಾಚ್ ಮುಗಿದ ಬಳಿಕ ಅವರಿಗೆ ತೀವ್ರ ನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಕಾಂಗ್ರಾದ ಖಾಸಗಿ ಆಸ್ಪತ್ರಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಕಿಶನ್ ಹೆಲ್ಮೆಟ್ ಧರಿಸಿದ್ದರಿಂದ ಹೆಚ್ಚಿನ ಅಪಾಯವೇನು ಆಗಿಲ್ಲ. ಅವರಿಗೆ ಸದ್ಯ ಪ್ರಾಥಮಿಕ ಚಿಕಿತ್ಸೆ ನೀಡಿದ್ದು ಸಿಟಿ ಸ್ಕ್ಯಾನ್ ಮಾಡಲಾಗಿದೆ ಎಂದು ತಂಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ