ರಾಜ್ಯದಲ್ಲಿ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಈ ಕುರಿತಂತೆ ಮಾಹಿತಿ ನೀಡಿ 2022ರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ವೈಯಕ್ತಿಕ ಅಂಕಗಳನ್ನು ಇಲಾಖಾ ವೆಬ್ ಸೈಟ್(www.schooleducation.kar.nic.in)ನಲ್ಲಿ ಪ್ರಕಟಿಸಲಾಗಿದೆ. ಇದನ್ನು ಓದಿ –ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಜಯರಾಮ ರಾಯಪುರ ನೇಮಕ
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳನ್ನು ಮತ್ತು ಮೀಸಲಾತಿ ವಿವರಗಳನ್ನು ಹೊರತುಪಡಿಸಿ, ಆನ್ ಲೈನ್ ಅರ್ಜಿಯಲ್ಲಿ ವೈಯಕ್ತಿಕ ವಿವರಗಳಾದ ಅಭ್ಯರ್ಥಿಯ ಹೆಸರು, ತಂದೆ ಹೆಸರು, ತಾಯಿ ಹೆಸರು, ಜನ್ಮ ದಿನಾಂಕ, ಪದವಿ, ಬಿಇಡಿ, ಡಿಎಲ್ ಇಡಿ ಮತ್ತು ಸಿಟಿಇಟಿ ಮತ್ತು ಟಿಇಟಿ ಅಂಕಗಳಿಗೆ ಸಂಬಂಧಿಸಿದಂತೆ ಮಾತ್ರ ತಿದ್ದುಪಡಿಗೆ ಅ.24 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ದಿನಾಂಕದ ನಂತರ ಯಾವುದೇ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ತಿಳಿಸಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ