ರಾಷ್ಟ್ರೀಯ

ಮುಂಬಯಿ ದಾಳಿಗೆ 15 ವರ್ಷದ ಕರಾಳ ನೆನಪು : 166 ಮಂದಿಯನ್ನು ಹತ್ಯೆ ಮಾಡಿದ ಪಾಪಿಸ್ತಾನದ ಭಯೋತ್ಪಾದಕರು

  • 26/11 ರಾತ್ರಿ ಮುಂಬೈ ನಗರವನ್ನು ಪ್ರವೇಶಿಸಿದ್ದ ರಕ್ತಪಿಪಾಸುಗಳು
  • ನಾಲ್ಕು ದಿನಗಳಲ್ಲಿ 166 ಜನರನ್ನು ಕೊಂದಿದ್ದ 10 ಮಂದಿ ಭಯೋತ್ಪಾದಕರು
  • 2012ರಲ್ಲಿ ಸೆರೆಯಾದ ಕಸಾಬ್‌ಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು

ಮುಂಬಯಿ : ಭಾರತದ ರಕ್ಷಣಾ ವ್ಯವಸ್ಥೆಯನ್ನೇ ನಡುಗಿಸಿ, ಬೆಚ್ಚಿ ಬೀಳಿಸಿದ್ದ 26/11 ಭಯೋತ್ಪಾದಕ ದಾಳಿಗೆ ಬರೋಬ್ಬರಿ 15 ವರ್ಷ.

2008, ನವೆಂಬರ್ 26ರಂದು ದೇಶದ ವಾಣಿಜ್ಯ ರಾಜಧಾನಿ ಮುಂಬೈಯನ್ನು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರ 10 ಮಂದಿ ಗುಂಪು ಸುತ್ತುವರಿದ ರಕ್ತಪಿಪಾಸುಗಳು ನಾಲ್ಕು ದಿನಗಳಲ್ಲಿ 166 ಜನರನ್ನು ಕೊಂದು 300 ಜನರು ಗಾಯಗೊಳುವಂತೆ ಮಾಡಿದ್ದರು.

ಮುಂಬೈಗೆ ಎಂಟ್ರಿಕೊಟ್ಟಿದ್ದ ಲಷ್ಕರ್ ಉಗ್ರರು ತಾಜ್ ಮತ್ತು ಒಬೆರಾಯ್ ಹೊಟೇಲ್‌ ಅನ್ನೇ ಟಾರ್ಗೆಟ್ ಮಾಡಿದ್ದರು. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್‌, ನಾರಿಮನ್ ಹೌಸ್‌ನಲ್ಲಿರುವ ಯಹೂದಿ ಕೇಂದ್ರ ಮತ್ತು ಲಿಯೋಪೋಲ್ಡ್ ಕೆಫೆ ಮೇಲೂ ದಾಳಿ ಮಾಡಿದ್ದರು. ಮುಂಬೈನ ಬಹು ಬೇಡಿಕೆಯ ಈ ಜಾಗಗಳಿಗೆ ಯುರೋಪಿಯನ್ನರು, ಭಾರತೀಯರು ಮತ್ತು ಯಹೂದಿಗಳು ಹೆಚ್ಚಾಗಿ ಭೇಟಿ ನೀಡುತ್ತಿದ್ದರು.

ಈ ಮಾಹಿತಿಯ ಆಧಾರದ ಮೇಲೆ ಭಯೋತ್ಪಾದಕರು ಈ ಜಾಗಗಳನ್ನು ಆಯ್ಕೆ ಮಾಡಲಾಗಿತ್ತು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲ್ವೇ ನಿಲ್ದಾಣದಲ್ಲಿ ಭಯಾನಕ ದಾಳಿ ನಡೆದಿತ್ತು. ಗುಂಡಿನ ಚಕಮಕಿಯಲ್ಲಿ ಒಂಬತ್ತು ಭಯೋತ್ಪಾದಕರು ಕೊಲ್ಲಲ್ಪಟ್ಟರು.

ಆದರೆ ಲಷ್ಕರ್‌ ಉಗ್ರ ಮೊಹಮ್ಮದ್ ಅಜ್ಮಲ್ ಅಮೀರ್ ಕಸಾಬ್‌ನನ್ನು ಮಾತ್ರ ಜೀವಂತವಾಗಿ ಬಂಧಿಸಲಾಗಿತ್ತು. ಮೇ 2010ರಲ್ಲಿ, ಕಸಾಬ್‌ಗೆ ಮರಣದಂಡನೆ ವಿಧಿಸಲಾಗಿತ್ತು. ಎರಡು ವರ್ಷಗಳ ನಂತರ ಪುಣೆ ಜೈಲಿನಲ್ಲಿ ಕಸಬ್‌ನನ್ನು ಗಲ್ಲಿಗೇರಿಸಲಾಯಿತು.ಮಂಡ್ಯ ಜಿಲ್ಲೆಯ ಸಂಕ್ಷಿಪ್ತ ಪರಿಚಯದ ಕವನ

26/ 11 ಭೀಕರವಾದ ಮುಂಬೈ ದಾಳಿಯು ಭಾರತದ ಭದ್ರತಾ ವ್ಯವಸ್ಥೆಯಲ್ಲಿ ಈಗಲೂ ಸವಾಲಾಗಿದೆ. ಇದರಿಂದ ಕಲಿತ ಪಾಠಗಳು ಭಯೋತ್ಪಾದನೆ ವಿರುದ್ಧದ ಹೋರಾಟ ಮತ್ತು ಜಾಗತಿಕ ಭದ್ರತೆಗೆ ನಿರ್ಣಾಯಕವಾಗಿವೆ. ಇದೀಗ 26/11 ದಾಳಿಯ 15ನೇ ವರ್ಷದಲ್ಲಿ ಹುತಾತ್ಮರಾದವರಿಗೆ ಮುಂಬೈನಲ್ಲಿ ನಮನ ಸಲ್ಲಿಸಲಾಗಿದೆ .

Team Newsnap
Leave a Comment

Recent Posts

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024