Main News

ಕಾಬೂಲ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 19 ಸಾವು 22 ಜನಕ್ಕೆ ಗಾಯ

ಅಫ್ಘಾನಿಸ್ತಾನದ ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಆಯೊಜಿಸಲಾಗಿದ್ದ ಪುಸ್ತಕ ಮೇಳಕ್ಕೆ ಇರಾನಿನ ರಾಯಭಾರಿ ಬಹದ್ದೂರ್ ಅಮಿನಿಯನ್ ಉದ್ಘಾಟಕರಾಗಿ ಭಾಗವಹಿಸಿದ್ದ ಸಮಯದಲ್ಲಿ ಬಂದೂಕುಧಾರಿಗಳು ನುಗ್ಗಿ ಸುಮಾರು 1 ಗಂಟೆಗಳ ಕಾಲ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಕನಿಷ್ಠ 19 ಮಂದಿ ಸತ್ತಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ.

‘ದಾಳಿಯಲ್ಲಿ ಮೂವರು ದಾಳಿಕೋರರು ಭಾಗಿಯಾಗಿದ್ದರು. ಇವರೆಲ್ಲರೂ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆ. ತಾಲಿಬಾನ್‌ನವರು ದಾಳಿಯಲ್ಲಿ ತಮ್ಮ ಭಾಗವಹಿಸುವಿಕೆಯನ್ನು ನಿರಾಕರಿಸಿರೂ, ದಾಳಿಯಲ್ಲಿ ತಾಲಿಬಾನ್ ಪಾತ್ರ ಇದೆ ಎಂಬುದಕ್ಕೆ ಪೂರಕವಾದ ಕೆಲವು ವಿವರಗಳಿವೆ. ಯು.ಎಸ್ ಬೆಂಬಲಿತ ಸರ್ಕಾರದೊಂದಿಗೆ ದಂಗೆಕೋರರು ಶಾಂತಿ ಮಾತುಕತೆ ನಡೆಯುತ್ತಿರುವ ವೇಳೆಯಲ್ಲಿಯೇ ಈ ದಾಳಿ ನಡೆದಿದೆ’ ಎಂದು ಅಫಘಾನಿಸ್ತಾನ ಸಚಿವಾಲಯದ ವಕ್ತಾರ ತಾರಿಕ್ ಏರಿಯನ್ ಹೇಳಿದರು.

ಗಲ್ಫ್ ಅರಬ್ ರಾಜ್ಯವಾದ ಖತಾರ್‌ನಲ್ಲಿ ನಡೆಯುತ್ತಿರುವ ಆ ಮಾತುಕತೆಗಳು ಅಮೇರಿಕಾ ಹಾಗೂ ಇಸ್ಲಾಮಿಕ್ ರಾಷ್ಟ್ರಗಳ ನಡೆವೆ ನಡೆಯುತ್ತಿರುವ ರಕ್ತಪಾತವನ್ನು ನಿಲ್ಲಿಸಲು ಪ್ರಯತ್ನಿಸುತ್ತಿವೆ. ಈ ವೇಳೆಯಲ್ಲಿಯೇ ಬಂದೂಕು, ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ದಾಳಿ ನಡೆಯಿತ್ತಿದ್ದಂತೆ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆವರಣದಿಂದ ಪಲಾಯನಗೈದರು ಮತ್ತು ಅಫ್ಘನ್ ಭದ್ರತಾ ಪಡೆಗಳು ಕಾವಲು ನಿಂತವಾದರೂ ಸಾವು ನೋವುಗಳು ಸಂಭವಿಸಿವೆ ಎಂದು ಏರಿಯನ್ ಹೇಳಿದರು.

ವಿಶ್ವವಿದ್ಯಾಲಯದ ಕಾನೂನು ಮತ್ತು ಪತ್ರಿಕೋದ್ಯಮ ಭಾಗದಲ್ಲಿ ಈ ದಾಳಿ ನಡೆದಿದೆ. ಅಫ್ಘಾನ್ ಮಾಧ್ಯಮವು ವಿಶ್ವವಿದ್ಯಾಲಯದಲ್ಲಿ ಪುಸ್ತಕ ಪ್ರದರ್ಶನವನ್ನು ನಡೆಸುತ್ತಿದ್ದ ಸಮಯದಲ್ಲಿ ಇರಾನ್‌ನ ಸಾಂಸ್ಕೃತಿಕ ಬಾಂಧವ್ಯ ಮೊಜ್ತಾಬಾ ನೊರೂಜಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

ತಾಲಿಬಾನ್ ಸಂಘಟನೆ ಘಟನೆಯಲ್ಲಿ ತಾನು ಭಾಗಿಯಾಗಿಲ್ಲ ಎಂದು ಹೇಳಿಕೆ ನೀಡಿದ್ದರೂ ಸಹ ಯಾವುದೇ ಗುಂಪು ತಕ್ಷಣ ನಡೆಯುತ್ತಿರುವ ದಾಳಿಯ ಜವಾಬ್ದಾರಿಯನ್ನು ತೆಗೆದುಕೊಳ್ಳಲಿಲ್ಲ. ಆದರೆ, ತಕ್ಷಣದ ಅನುಮಾನ ಇಸ್ಲಾಮಿಕ್ ಸ್ಟೇಟ್ ಗುಂಪಿನ ಮೇಲೆ ಬಿದ್ದಿದೆ.

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024