ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಮಹೇಶ್ ನನ್ನ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ್ದರು. ಈಗ ಪ್ರಾದೇಶಿಕ ಆಯುಕ್ತರು ನನ್ನ ಮೇಲಿನ ಆರೋಪ ಸುಳ್ಳು ಎಂದು ಹೇಳಿದ್ದಾರೆ. ಅವರ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದೆ.
ಆ ನಿಟ್ಟಿನಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಜೊತೆಗೆ 1 ಕೋಟಿ ರುಗಳ ಮಾನ ನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಹೇಳಿದರು.
ಇದೇ ವೇಳೆ ಮಹೇಶ್ ಪರ ವಕೀಲ ಅರುಣ್ ಕುಮಾರ್ ಮಾತನಾಡಿ ಐಎಎಸ್ ಅಧಿಕಾರಿಗಳಿಗೆ ಬುದ್ಧಿ ಜಾಸ್ತಿ ಇರುತ್ತದೆ.
ರೋಹಿಣಿ ಸಿಂಧೂರಿ ಅವರು ಆಡಿಯೋದಲ್ಲಿ ಸಾ.ರಾ.ಮಹೇಶ್ ಜೈಲಲ್ಲಿ ಇರುತ್ತಾರೆ ಎಂದು ಆರೋಪ ಮಾಡಿದ್ದಾರೆ. ಈ ಸಂಬಂಧ ಸಾ.ರಾ.ಮಹೇಶ್ ಪರವಾಗಿ ಲೀಗಲ್ ನೋಟಿಸ್ ಅನ್ನು 2021 ರ ಜುಲೈ 1 ರಂದು
ಜಾರಿ ಮಾಡಿದ್ದೆವು. ಸಾಮಾಜಿಕ ಜಾಲತಾಣದ ಆಡಿಯೋದಲ್ಲಿ ನಿಮ್ಮ ಧ್ವನಿಯೇ, ಉದ್ದೇಶ ಪೂರ್ವಕವಾಗಿ ಮಾತನಾಡಿದ್ದೀರ ಎಂದು ಎರಡು ಪ್ರಶ್ನೆ ಕೇಳಿದ್ದೆವು. ಅದು ಖಾಸಗಿ ಸಂಭಾಷಣೆ ಎಂದು ಒಪ್ಪಿಕೊಂಡಿದ್ದಾರೆ. ಇದನ್ನು ಓದಿ – ಅಮೆರಿಕಾ ಡಬಲ್ ಗೇಮ್ : ಪಾಕ್ ವಾಯುಸೇನೆಗೆ 3.5 ಸಾವಿರಾರು ಕೋಟಿ ನೆರವು
ಈ ಆಧಾರದ ಮೇಲೆ 2ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹಾಕಿದ್ದೇವೆ. ಒಂದು ಕೋಟಿ ರೂ. ನಷ್ಟ ಭರಿಸುವಂತೆ ಮೊಕದ್ದಮೆ ಹೂಡಿದ್ದೇವೆ. 20-10-2022ರಂದು ರೋಹಿಣಿ ಸಿಂಧೂರಿ ನ್ಯಾಯಾಲಯಕ್ಕೆ ಉತ್ತರ ಕೊಡಬೇಕಾಗುತ್ತೆ. ಈಗಾಗಲೇ ಖಾಸಗಿ ಸಂಭಾಷಣೆ ಅಂತ ಒಪ್ಪಿಕೊಂಡಿರುವುದರಿಂದ ಬೇರೆ ಹೇಳಿಕೆ ನೀಡಲು ಅವಕಾಶ ಇಲ್ಲ. ಆ ಸಂಭಾಷಣೆಯ ಹಿನ್ನೆಲೆ, ಉದ್ದೇಶವನ್ನೂ ಕೇಸ್ಗೆ ಸೇರಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ ಎಂದು ವಕೀಲ ಅರುಣ್ ಕುಮಾರ್ ಹೇಳಿದ್ದಾರೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment