Main News

ಪ್ರಿಯತಮನಿಗಾಗಿ ತಾಯಿಯನ್ನೇ ಯಾಮಾರಿಸಿ 1 kG ಚಿನ್ನ ಕದ್ದ ಮಗಳು – ದೀಪ್ತಿ , ಮದನ್ ಬಂಧನ

ಪ್ರಿಯಕರನಿಗಾಗಿ ತಾಯಿಯ 1 ಕೆಜಿ ಚಿನ್ನಾಭರಣ ಕದ್ದ ಪುತ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನಕ್ಕೆ ಕುಮ್ಮಕ್ಕು ನೀಡಿದ ಪ್ರಿಯಕರ ಕೂಡ ಜೈಲು ಸೇರಿದ್ದಾನೆ.

ಈಕೆ ವಿಚ್ಛೇದಿತೆ. ಆತ ಎರಡು ಮಕ್ಕಳ ತಂದೆ. ಇಬ್ಬರ ನಡುವೆಯೂ
ಪ್ರೀತಿಯ ಬಂಧನವಾದ ನಂತರ ಆಗಿರುವ ಕಥೆಯೇ ಬೇರೆ.

ಪ್ರಿಯಕರನಿಗಾಗಿ ತನ್ನ ತಾಯಿಗೆ ಸೇರಿದ 1ಕೆ ಜಿ ಚಿನ್ನಾಭರಣವನ್ನು ಕಳ್ಳತನ ಮಾಡಿದ ಯುವತಿ ಹಾಗೂ ಆಕೆಯ‌ ಪ್ರಿಯತಮನನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ‌.

ಇದನ್ನು ಓದಿ :ಬಂಧಿತ ಐಎಎಸ್ ಅಧಿಕಾರಿ ಜೊತೆ ಅಮಿತ್ ಶಾ ಫೋಟೊ ಶೇರ್ – ನಿರ್ದೇಶಕನ ವಿರುದ್ಧ FIR

ಜಕ್ಕೂರು ಲೇಔಟ್ ನಿವಾಸಿ ರತ್ನಮ್ಮನೇ ಮಗಳು ದೀಪ್ತಿ ವಿರುದ್ಧ ನೀಡಿದ ದೂರಿನ ಮೇರೆಗೆ ದೀಪ್ತಿ ಹಾಗೂ ಪ್ರಿಯಕರ ಮದನ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ

ಜಕ್ಕೂರು ಲೇಔಟ್​ನಲ್ಲಿ ರತ್ನಮ್ಮ‌ ಟೈಲರ್ ಕೆಲಸ ಮಾಡುತ್ತಿದ್ದರೆ, ಪುತ್ರಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಳು. ದೀಪ್ತಿಗೆ ಡಿವೋರ್ಸ್ ಆಗಿತ್ತು.‌ ಈ ನಡುವೆ ಡ್ರೈವಿಂಗ್ ಕಲಿಯಲು ಮದನ್ ನಡೆಸುತ್ತಿದ್ದ ಡೈವಿಂಗ್ ಸ್ಕೂಲ್​​ಗೆ ಸೇರಿಕೊಂಡಿದ್ದಳು.‌ ಇಲ್ಲಿ ಶುರುವಾದ ಸ್ನೇಹ ಪ್ರೀತಿಗೆ ತಿರುಗಿದೆ. ಮದನ್​​ಗೆ ಮದುವೆಯಾಗಿ ಇಬ್ಬರೂ ಮಕ್ಕಳಿದ್ದರೂ ದೀಪ್ತಿ ಪ್ರೀತಿಗೆ ಸೈ ಅಂದಿದ್ದ. ಮದನ್ ಪ್ರೀತಿಗೆ ಶರಣಾಗಿದ್ದ ದೀಪ್ತಿ, ಪ್ರಿಯಕರನ ಅಣತಿಯಂತೆ ಮನೆಯಲ್ಲಿದ್ದ ಚಿನ್ನಾಭರಣ ಕದ್ದಿದ್ದಾಳೆ.

ಹಂತ-ಹಂತವಾಗಿ ಸುಮಾರು ಒಂದು ಕೆ.ಜಿ.ಚಿನ್ನ ಕಳ್ಳತನ ಮಾಡಿ ಕೊಟ್ಟಿದ್ದಾಳೆ. ತಾಯಿಗೆ ಅನುಮಾನ ಬಾರದಿರಲು ಕದ್ದ ಜಾಗದಲ್ಲಿ ನಕಲಿ ಚಿನ್ನಾಭರಣ ಇಟ್ಟಿದ್ದಾಳೆ.‌

ಕೆಲ ದಿನಗಳ ಹಿಂದೆ ಮದುವೆ ಸಲುವಾಗಿ ಒಡವೆ ಧರಿಸಿಕೊಳ್ಳಲು ಬೀರುವಿನಲ್ಲಿ ನೋಡಿದಾಗ ಚಿನ್ನಾಭರಣದಲ್ಲಿ ವ್ಯತ್ಯಾಸ ಕಂಡುಬಂದಿದೆ. ಈ ಬಗ್ಗೆ ಮಗಳನ್ನು ಪ್ರಶ್ನಿಸಿದಾಗ ಗೊತ್ತಿಲ್ಲದಂತೆ ನಟಿಸಿದ್ದಾಳೆ.‌

ಅನುಮಾನಗೊಂಡು ಆಗಾಗ ಮನೆಗೆ ಬರುತ್ತಿದ್ದ ಮದನ್‌ ಹಾಗೂ ಮಗಳ ವಿರುದ್ಧ ತಾಯಿ ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಚಿನ್ನಾಭರಣ ಕದ್ದಿರುವುದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ.

ಕದ್ದ ಚಿನ್ನವನ್ನು ಮುತ್ತೂಟ್ ಗೋಲ್ಡ್ ಲೋನ್ ಹಾಗೂ ಮಣಪ್ಪುರಂ ಗೋಲ್ಡ್​ನಲ್ಲಿ ಅಡಮಾನ ಇಟ್ಟಿದ್ದಾರೆ. ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024