ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಎಂ ಉದಯ್ ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿದ್ದಾರೆ.
ಕೆಎಂ ಉದಯ್ ಬೆಂಬಲಿಗ ಮದ್ದೂರು ಪಟ್ಟಣದ ದೊಡ್ಡಿ ಬೀದಿಯ ಸುರೇಶ್ ಹಾಗೂ ರಮೇಶ್ ಮನೆ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದೆ.
ಬೆಳ್ಳಂಬೆಳಗ್ಗೆ 5:30ರ ವೇಳೆಗೆ ಅಧಿಕಾರಿಗಳು ದಾಳಿ ಮಾಡಿ 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಂಡಿದ್ದಾರೆ.
ಸುರೇಶ್ ಮನೆಯಲ್ಲಿ 2 ಕೋಟಿ ರೂ. ಪತ್ತೆಯಾಗಿದೆ, ರಮೇಶ್ ಮನೆಯಲ್ಲಿ 3.50 ಲಕ್ಷ ರೂ. ಪತ್ತೆಯಾಗಿದೆ. ಹಾವೇರಿ ಕಾಂಗ್ರೆಸ್ ನಾಯಕ ಚನ್ನಬಸಪ್ಪನ ಮನೆ ಮೇಲೆ ಐಟಿ ದಾಳಿ
ಚುನಾವಣಾ ಅಧಿಕಾರಿಗಳು ಹಣವನ್ನು ಮದ್ದೂರು ಪೊಲೀಸರ ವಶಕ್ಕೆ ನೀಡಿದ್ದಾರೆ.
ಪೊಲೀಸರು ಸುರೇಶ್ ಬಾಬು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India