ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2000 ರು ನೆರವು ನೀಡಲು ನಿರ್ಧರಿಸಲಾಗಿದೆ, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಘೋಷಿಸಿದರು.
ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ಮಂಗಳವಾರ ರಾತ್ರಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ 2000 ರು ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ ಶುರು ಮಾಡಲಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದರು.
ನಾವು ನಾಯಕರಲ್ಲ ಸೇವಕರು:
ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಿದ್ದ ನಾ ನಾಯಕಿ ಕಾರ್ಯಕ್ರಮವನ್ನು ಲೇವಡಿ ಮಾಡಿದ ಅವರು, ನಾ ನಾಯಕ, ನಾ ನಾಯಕಿ ಎಂದು ನಾವು ಹೇಳುವುದಿಲ್ಲ. ಬದಲಾಗಿ ಪ್ರಧಾನಿ ಮೋದಿ ಅವರೇ ಹೇಳಿದಂತೆ ನಾವೆಲ್ಲ ಸೇವಕರು ಎಂದರು.ಜನಪ್ರಿಯ ಬಜೆಟ್ ಬ್ಲೂಪ್ರಿಂಟ್ಗೆ ಸಿಎಂ ಸೂಚನೆ- ಎಲೆಕ್ಷನ್ ಬಜೆಟ್ನಲ್ಲಿ ಬಂಪರ್ ಗಿಫ್ಟ್
ಅಲೆಮಾರಿಗಳಿಗೆ ನೆಲೆ:
ಕಳೆದ 75 ವರ್ಷಗಳಿಂದ ಆಗದ ಕೆಲಸವನ್ನು ಬಿಜೆಪಿ ನೇತೃತ್ವದ ಸರ್ಕಾರ ಮಾಡಿದ್ದು, ದಾಖಲೆಯೇ ಇಲ್ಲದ ತಾಂಡಾಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಮೂಲಕ ಅಲೆಮಾರಿಗಳಿಗೆ ನೆಲೆ ನೀಡುವ ಕೆಲಸ ಮಾಡಿದ್ದೇವೆ. ಆ ಮೂಲಕ ಒಂದು ಉದಾತ್ತ ಕೆಲಸ ಮಾಡಿದ ಹೆಮ್ಮೆ ಇದೆ ಎಂದು ಸಚಿವ ಅಶೋಕ ಹೇಳಿದರು.
ಮಾಚನಾಳ ತಾಂಡಾಕ್ಕೆ ₹ 1 ಕೋಟಿ: ಹಕ್ಕುಪತ್ರ ವಿತರಣೆಯ ಬಳಿಕ ಮಾಚನಾಳ ತಾಂಡಾ ಗ್ರಾಮವಾಗಿ ಪರಿವರ್ತನೆಯಾಗಲಿದ್ದು, ಗ್ರಾಮದ ಸಮಗ್ರ ಅಭಿವೃದ್ಧಿಗೆ ₹ 1 ಕೋಟಿ ನೆರವು ನೀಡಲಾಗುವುದು ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಹಕ್ಕುಪತ್ರ ವಿತರಣೆಯ ಬಗ್ಗೆ ಈಗ ತಕರಾರು ತೆಗೆಯುವ ಕಾಂಗ್ರೆಸ್ಸಿಗರು ಇಷ್ಟು ವರ್ಷ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಕೆಕೆಆರ್ ಡಿಬಿ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ ಇದ್ದರು.
- ಲಂಚ ಸ್ವೀಕಾರ : ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ
- 17 ಗಂಟೆಗಳ ಕಾಲ ಪುಟ್ಟ ಕಂದನನ್ನು ಕಾಪಾಡಿದ ಏಳು ವರ್ಷದ ಅಕ್ಕ !
- 7 ನೇ ವೇತನ ಆಯೋಗ : ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಗಸೂಚಿ ಪ್ರಕಟ
- ರೆಪೊ ದರ ಮತ್ತೆ ಹೆಚ್ಚಿಸಿದ ಆರ್ ಬಿ ಐ : ಸಾಲದ ಕಂತು ಏರಿಕೆ
- ಬ್ರಾಹ್ಮಣರು ಈ ದೇಶಕ್ಕೆ ಸಂಸ್ಕಾರ ಕೊಟ್ಟಿದ್ದಾರೆ :ಡಿ ಸಿ ತಮ್ಮಣ್ಣ
- ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ
More Stories
ಲಂಚ ಸ್ವೀಕಾರ : ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ
7 ನೇ ವೇತನ ಆಯೋಗ : ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಗಸೂಚಿ ಪ್ರಕಟ
ಬ್ರಾಹ್ಮಣರು ಈ ದೇಶಕ್ಕೆ ಸಂಸ್ಕಾರ ಕೊಟ್ಟಿದ್ದಾರೆ :ಡಿ ಸಿ ತಮ್ಮಣ್ಣ