ಜೂನ್ 1ರಂದು ಕ್ಯಾಬಿನೆಟ್ ಇದೆ. ಅಂದು ಗೈಡ್ಲೈನ್ಸ್ ಬರಲಿದೆ. ಸ್ಟ್ರೈಕ್ ಮಾಡೋರಿಗೆ ಬೇಡ ಅನ್ನಲ್ಲ, ಮಾಡ್ಲಿ. 15 ಲಕ್ಷ ರೂ. ಪ್ರತಿಯೊಬ್ಬರ ಅಕೌಂಟ್ಗೆ ಹಾಕ್ತೀವಿ ಅಂದ್ರಲ್ಲಾ, ಹಾಕಿದ್ರಾ? ಮಗು ಹುಟ್ಟಿ ಇನ್ನೂ 15 ದಿನ ಆಗಿದೆ. ಬಟ್ಟೆ ಹೊಲಿಸಬೇಕು, ಅಳತೆ ಕೊಡಬೇಕು ಎಂದು ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬವನ್ನು ಸಮರ್ಥಿಸಿಕೊಂಡರು.
ಮೊದಲು ಬಿಜೆಪಿ ಅವರು ಕೊಟ್ಟ ಭರವಸೆ ಬಗ್ಗೆ ಮಾತಾಡ್ಲಿ. ಜನರಿಗೆ ಕೊಟ್ಟ ಭರವಸೆ ಈಡೇರಿಸಬೇಕು. ಟೀಕೆ ಮಾಡಲಿ. ಒಂದು ಲಕ್ಷ ಸಾಲ ಮನ್ನಾ ಮಾಡ್ತೇವೆ ಅಂದ್ರು.. ಏನಾಯಿತು ಎಂದು ವಿಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
ಖಾತೆ ವಿಚಾರವಾಗಿ ರಾಮಲಿಂಗರೆಡ್ಡಿ ಅಸಮಾಧಾನ ಕುರಿತು ಪ್ರತಿಕ್ರಿಯಿಸಿ, ಪಕ್ಷದ ಹಿತದೃಷ್ಠಿಯಿಂದ ಭೇಟಿ ನೀಡಿ ಮಾತನಾಡಿದ್ದೇನೆ. ಕೆಲವೊಂದು ಊಹಾಪೋಹದ ಸ್ಟೋರಿ ಬಂದಿದೆ. ಎಂಟು ಬಾರಿ ಯಾರಾದರೂ ಆಯ್ಕೆಯಾಗಿದ್ರೆ ಅದು ರಾಮಲಿಂಗಾರೆಡ್ಡಿ. ಗ್ಯಾರಂಟಿ ಸಂಬಂಧಿಸಿದ ಖಾತೆ ವಹಿಸಿಕೊಳ್ಳಲು ಸಚಿವರ ಹಿಂದೇಟು.?
ನಾವು ಈ ಪಕ್ಷ ಕಟ್ಟಿದ್ದೇವೆ, ಬೆಳೆಸಿದ್ದೇವೆ. ಸಾಕಷ್ಟು ನೋವುಗಳನ್ನು ಅನುಭವಿಸಿದ್ದೇವೆ ಎಂದು ಹೇಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು