ಒಂದೇ ಮನೆಯಲ್ಲಿ ಅತ್ತೆ-ಸೊಸೆ ಇದ್ದರೆ ಯಾರಿಗೆ ದುಡ್ಡು ಹಾಕಬೇಕು? ಮನೆ ಯಜಮಾನಿ ಯಾರು? ಯಜಮಾನಿಗೆ ಬ್ಯಾಂಕ್ ಖಾತೆ ಇದೆಯಾ? ಎಲ್ಲವೂ ತೀರ್ಮಾನ ಆದನಂತರ ಗ್ಯಾರೆಂಟಿ ಜಾರಿ ಮಾಡುವ ಸಂಬಂಧ ನಿರ್ಧಾರ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಜೂನ್ 1ರಂದು ಕ್ಯಾಬಿನೆಟ್ ಇದೆ. ಅಂದು ಗೈಡ್ಲೈನ್ಸ್ ಬರಲಿದೆ. ಸ್ಟ್ರೈಕ್ ಮಾಡೋರಿಗೆ ಬೇಡ ಅನ್ನಲ್ಲ, ಮಾಡ್ಲಿ. 15 ಲಕ್ಷ ರೂ. ಪ್ರತಿಯೊಬ್ಬರ ಅಕೌಂಟ್ಗೆ ಹಾಕ್ತೀವಿ ಅಂದ್ರಲ್ಲಾ, ಹಾಕಿದ್ರಾ? ಮಗು ಹುಟ್ಟಿ ಇನ್ನೂ 15 ದಿನ ಆಗಿದೆ. ಬಟ್ಟೆ ಹೊಲಿಸಬೇಕು, ಅಳತೆ ಕೊಡಬೇಕು ಎಂದು ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬವನ್ನು ಸಮರ್ಥಿಸಿಕೊಂಡರು.
ಮೊದಲು ಬಿಜೆಪಿ ಅವರು ಕೊಟ್ಟ ಭರವಸೆ ಬಗ್ಗೆ ಮಾತಾಡ್ಲಿ. ಜನರಿಗೆ ಕೊಟ್ಟ ಭರವಸೆ ಈಡೇರಿಸಬೇಕು. ಟೀಕೆ ಮಾಡಲಿ. ಒಂದು ಲಕ್ಷ ಸಾಲ ಮನ್ನಾ ಮಾಡ್ತೇವೆ ಅಂದ್ರು.. ಏನಾಯಿತು ಎಂದು ವಿಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
ಖಾತೆ ವಿಚಾರವಾಗಿ ರಾಮಲಿಂಗರೆಡ್ಡಿ ಅಸಮಾಧಾನ ಕುರಿತು ಪ್ರತಿಕ್ರಿಯಿಸಿ, ಪಕ್ಷದ ಹಿತದೃಷ್ಠಿಯಿಂದ ಭೇಟಿ ನೀಡಿ ಮಾತನಾಡಿದ್ದೇನೆ. ಕೆಲವೊಂದು ಊಹಾಪೋಹದ ಸ್ಟೋರಿ ಬಂದಿದೆ. ಎಂಟು ಬಾರಿ ಯಾರಾದರೂ ಆಯ್ಕೆಯಾಗಿದ್ರೆ ಅದು ರಾಮಲಿಂಗಾರೆಡ್ಡಿ. ಗ್ಯಾರಂಟಿ ಸಂಬಂಧಿಸಿದ ಖಾತೆ ವಹಿಸಿಕೊಳ್ಳಲು ಸಚಿವರ ಹಿಂದೇಟು.?
ನಾವು ಈ ಪಕ್ಷ ಕಟ್ಟಿದ್ದೇವೆ, ಬೆಳೆಸಿದ್ದೇವೆ. ಸಾಕಷ್ಟು ನೋವುಗಳನ್ನು ಅನುಭವಿಸಿದ್ದೇವೆ ಎಂದು ಹೇಳಿದರು.
- Rocking Star ಯಶ್ ನಟನೆಯ ‘ಟಾಕ್ಸಿಕ್ ’ ಸಿನಿಮಾ ಟೈಟಲ್ ರಿಲೀಸ್
- ಶೇ.6.50ರಷ್ಟು ‘ರೆಪೋ ದರ’ವನ್ನು ಯಥಾಸ್ಥಿತಿ ಮುಂದುವರೆಸಿದ ‘RBI’
- ಮಂಡ್ಯ ನಗರಕ್ಕೆ ನೀರು ಸರಬರಾಜು ದರ ಮಾಸಿಕ 225 ರು ನಿಗದಿ – ಜಿಲ್ಲಾ ಮಂತ್ರಿ ಸೂಚನೆ
- 4144 ಮೆಟ್ರಿಕ್ ಟನ್ ದಾಟಿದ ‘ಮೈಸೂರು ಸ್ಯಾಂಡಲ್ ಸೋಪ್’ ಮಾಸಿಕ ಉತ್ಪಾದನೆ
- ನಂದಿನಿ ಹಾಲಿನ ದರ ಏರಿಕೆ ?
- ಶೀಘ್ರದಲ್ಲೇ BMTCಗೆ 921 ಎಲೆಕ್ಟ್ರಿಕ್ ಬಸ್ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ