2023ನೇ ವಿಧಾನ ಸಭಾ ಚುನಾವಣೆ ನಮ್ಮ ಪಾಲಿಗೆ ಒಂದು ರೀತಿ ಕೊನೆ ಚುನಾವಣೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ರೋಹಿಣಿ ಸಿಂಧೂರಿ ವಿರುದ್ದ 1 ಕೋಟಿ ರು ಮಾನನಷ್ಟ ಮೊಕದ್ದಮೆ ದಾಖಲು – ಸಾರಾ ಮಹೇಶ್
ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿ ಅಂಚೆಪಾಳ್ಯದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ನಿಖಿಲ್, ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಹೆಚ್.ಡಿ.ದೇವೆಗೌಡರಿಗೆ 89 ವರ್ಷ ವಯಸ್ಸಾಗಿದೆ. ಕಳೆದ ಎರಡೂವರೆ ತಿಂಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿಲ್ಲ. ಹಲವು ಕಾರ್ಯಕರ್ತರಲ್ಲಿ ಒಂದು ರೀತಿಯ ಗೊಂದಲ ಸೃಷ್ಟಿಯಾಗಿತ್ತು. ಎರಡು ತಿಂಗಳ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ಕೊಟ್ಟರು. ದೇವೇಗೌಡರು ನಮ್ಮ ಜೊತೆ ನೂರಾರು ವರ್ಷಗಳ ಕಾಲ ಬದುಕುತ್ತಾರೆ ಎಂದರು.
2023ನೇ ಚುನಾವಣೆ ನಮ್ಮ ಪಾಲಿಗೆ ಒಂದು ರೀತಿ ಕೊನೆಯ ಚುನಾವಣೆ ಎಂದು ನಿಖಿಲ್ ಭಾವುಕರಾದರು.. ಜೆಡಿಎಸ್ ಒಂದು ಹೊಸ ಅಧ್ಯಾಯ ಪ್ರಾರಂಭ ಆಗಬೇಕು. ನಮ್ಮ ತಂದೆ ಉಳಿದಿದ್ದೇ ಹೆಚ್ಚು, ನಮ್ಮ ತಂದೆಯನ್ನು ಉಳಿಸಿರೋದು ಆ ಭಗವಂತ. ರೈತರ ಜೀವನವನ್ನು ಹಸನಗೊಳಿಸ್ಬೇಕು ಎಂಬ ಉದ್ದೇಶದಿಂದ.
ನಿಮ್ಮೆಲ್ಲರ ಆಶೀರ್ವಾದದಿಂದ ಎಷ್ಟು ಜನ ಹೆಣ್ಮಕ್ಕಳು ಮನೆಗಳಲ್ಲಿ ದೀಪ ಹಚ್ಚಿದ್ದಾರೆ. ಕುಮಾರಣ್ಣನಿಗೆ ಏನು ಆಗಬಾರದು ಎಂದು. ನೂರಾರು ವರ್ಷಗಳ ಕಾಲ ಬದುಕಬೇಕು ಅಂತಾ. ಜನ ಏನೂ ಅಪೇಕ್ಷೆ ಪಡದೇ ಅವರು ಮುಖ್ಯಮಂತ್ರಿ ಆಗಬೇಕು ಎಂದು ಹಾರೈಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು