Categories: Main News

ಈ ವರ್ಷ 30 ಲಕ್ಷ ರೈತರಿಗೆ 20810 ಕೋಟಿ ರು. ಬೆಳೆ ಸಾಲ: ಸಚಿವ ಸೋಮಶೇಖರ್ ಘೋಷಣೆ

  • ರೈತರಿಗೆ ತೊಂದರೆಯಾಗದಂತೆ ಹೆಚ್ಚಿನ ಸಾಲ ನೀಡಲು ಮುಖ್ಯಮಂತ್ರಿಗಳ ಸೂಚನೆ
  • ಕಳೆದ ಸಾಲಿನಲ್ಲಿ 25.93 ಲಕ್ಷ ರೈತರಿಗೆ 17,490 ಕೋಟಿ ರೂಪಾಯಿ ಬೆಳೆ ಸಾಲ ನೀಡಿಕೆ, ಶೇ. 114.70 ಸಾಧನೆ
  • ಲಾಕ್‌ಡೌನ್ ಮುಗಿದ ಬಳಿಕ ಡಿಸಿಸಿ ಬ್ಯಾಂಕ್‌ಗಳಿಗೆ ಭೇಟಿ
  • ರೈತರಿಗೆ ನೂರಕ್ಕೆ ನೂರು ಸಾಲ ಸಿಗಲು ಕ್ರಮ

ಸಚಿವರು ಕಳೆದ ಸಾಲಿನಲ್ಲಿ ಶೇ. 114.70 ರೈತರಿಗೆ ಬೆಳೆಸಾಲ ನೀಡಿಕೆ ಮೂಲಕ ಗುರಿಯನ್ನು ಮೀರಿ ಸಾಧನೆ ಮಾಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಪ್ರಸಕ್ತ ಸಾಲಿನ ಅಂದರೆ, 2021-22ರಲ್ಲಿ 30 ಲಕ್ಷ ರೈತರಿಗೆ 20810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿಯನ್ನು ನೀಡಿದ್ದೇವೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಯಾವುದೇ ಕಾರಣಕ್ಕೂ ನಮ್ಮ ರೈತಾಪಿ ವರ್ಗದವರಿಗೆ ತೊಂದರೆಯಾಗಬಾರದು. ಹೀಗಾಗಿ 30 ಲಕ್ಷ ರೈತರಿಗೆ ಹೆಚ್ಚಿನ ಸಾಲ ತಲುಪುವಂತಾಗಬೇಕು ಎಂದು ಮುಖ್ಯಮಂತ್ರಿಗಳು ನೀಡಿದ ಸೂಚನೆಯನ್ವಯ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಕಳೆದ ಆರ್ಥಿಕ ವರ್ಷವಾದ 2020-21ರಲ್ಲಿ 24.50 ಲಕ್ಷ ರೈತರಿಗೆ 15400 ಕೋಟಿ ರೂಪಾಯಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಿಕೆಯ ಗುರಿಯನ್ನು ಹೊಂದಲಾಗಿತ್ತು. ನಮ್ಮ ಅಪೆಕ್ಸ್ ಬ್ಯಾಂಕ್ ಹಾಗೂ 21 ಡಿಸಿಸಿ ಬ್ಯಾಂಕ್ ಗಳು 25,93,982 ರೈತರಿಗೆ 17490 ಕೋಟಿ ರೂಪಾಯಿ ಸಾಲವನ್ನು ನೀಡಿವೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಶೇಕಡಾ 100 ಗುರಿ ಮೀರಿ ಶೇ. 114.70 ಸಾಧನೆಯನ್ನು ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಈ ಸಾಲಿನಲ್ಲಿಯೂ ಇದೇ ರೀತಿಯ ಸಾಧನೆಯನ್ನು ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.

*ಲಾಕ್‌ಡೌನ್ ಮುಗಿದ ಬಳಿಕ ಡಿಸಿಸಿ ಬ್ಯಾಂಕ್‌ಗಳಿಗೆ ಭೇಟಿ:
21 ಡಿಸಿಸಿ ಬ್ಯಾಂಕ್ ಗಳಿಗೆ ಈಗಾಗಲೇ ಸೂಚನೆಯನ್ನು ನೀಡಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ 30 ಲಕ್ಷ ರೈತರನ್ನೂ ತಲುಪಬೇಕು, 20810 ಕೋಟಿ ರೂ. ಬೆಳೆ ಸಾಲವನ್ನು ನೀಡಬೇಕು ಎಂದು ಸೂಚಿಸಿದ್ದೇನೆ. ಲಾಕ್‌ಡೌನ್ ಮುಗಿದ ಬಳಿಕ ಡಿಸಿಸಿ ಬ್ಯಾಂಕ್‌ಗಳಿಗೆ ನಾನೇ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ, ಸಲಹೆ-ಸೂಚನೆಗಳನ್ನು ನೀಡಲಿದ್ದೇನೆ. ಕಳೆದ ಬಾರಿ 5-6 ಡಿಸಿಸಿ ಬ್ಯಾಂಕ್ ಗಳು ಶೇ. 100 ಗುರಿ ಮುಟ್ಟಲು ಸಾಧ್ಯವಾಗಿಲ್ಲ. ಈ ವೇಳೆ ಅವರಿಗೂ ಸಹ ಗುರಿ ಮುಟ್ಟಲೇಬೇಕು ಎಂದು ತಾಕೀತು ಮಾಡಿದರು.

ರೈತರಿಗೆ ನೂರಕ್ಕೆ ನೂರು ಸಾಲ ಸಿಗಬೇಕು:
ಡಿಸಿಸಿ ಬ್ಯಾಂಕ್ ಗಳು ತಮಗೆ ನೀಡಿರುವ ಗುರಿಯನ್ನು ತಲುಪಲೇಬೇಕು. ಯಾವುದೇ ಕಾರಣಕ್ಕೂ ಇದರಿಂದ ತಪ್ಪಿಸಿಕೊಳ್ಳಬಾರದು. ರೈತರಿಗೆ ನೂರಕ್ಕೆ ನೂರು ಸಾಲ ಸಿಗಬೇಕು. 21 ಡಿಸಿಸಿ ಬ್ಯಾಂಕ್ ಗಳ ಪ್ರಗತಿ ಪರಿಶೀಲನೆಯನ್ನೂ ಮಾಡುತ್ತೇವೆ. 30 ಲಕ್ಷ ರೈತರಿಗೆ 20810 ಕೋಟಿ ರು ಬೆಳೆ ಸಾಲ ದೊರೆಯುವಂತೆ ನೋಡಿಕೊಳ್ಳಲಾಗುವುದು ಎಂದರು

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು, ಶಾಸಕರಾದ ಬೆಳ್ಳಿ ಪ್ರಕಾಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಸಹಕಾರ ಸಂಘಗಳ ನಿಬಂಧಕರಾದ ಜಿಯಾವುಲ್ಲ, ಎಲ್ಲ ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024