25 ಕೋಟಿ ರು ಸಾಲ ಪ್ರಕರಣ: ವಿವಾದಕ್ಕೆ ಮಂಗಳ ಹಾಡಲು ನಿರ್ಧಾರ – ನಟ ದರ್ಶನ್

Team Newsnap
0 Min Read

25 ಕೋಟಿ ರು ಸಾಲ ಪ್ರಕರಣವನ್ನು ಮಾತನಾಡಿ ನಿರ್ಧರಿಸಿಕೊಳ್ಳಲು ಮುಂದಾಗಿ, ನಾವು ಇಲ್ಲಿಗೆ ಮಂಗಳ ಹಾಡಿದ್ದೇವೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ಇದು ನಿಲ್ಲುವ ಕೇಸೂ ಅಲ್ಲ. ಯಾರನ್ನೂ ಅರೆಸ್ಟ್ ಮಾಡುವುದಿಲ್ಲ. ಇದು ಮುಗಿದ ಕೇಸ್ ಆಗಿದೆ. ನಾನು ನಿರ್ಮಾಪಕರನ್ನು ಬಿಟ್ಟು ಕೊಡಲ್ಲ. ನಮ್ಮದೆಲ್ಲಾ ಮುಗಿದಿದೆ ಇನ್ನೇನು ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ನಾವು ಉಮಾಪತಿ ಜೊತೆಗೆ ಮಾತನಾಡುತ್ತೇವೆ. ಉಮಾಪತಿಯನ್ನು ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಅರುಣಾ ಹೇಳಿದ್ದಾರೆ. ನಾವು ನಾವೇ ಮಾತನಾಡಿ ಈ ವಿಚಾರವನ್ನು ಬಗೆ ಹರಿಸಿಕೊಳ್ಳುತ್ತೇವೆ. ನಾವು ಮಂಗಳ ಹಾಡಿದ್ದೇವೆ. ಉಮಾಪತಿಯವರು ಫುಲ್‍ಸ್ಟಾಪ್ ಹಾಕಿದ್ದಾರೆ ಎಂದರು.

Share This Article
Leave a comment