ಮಾಜಿ ಸಿಎಂ BSY ರಿಂದ ಭಜರಂಗದಳದ ಹರ್ಷ ಕುಟುಂಬಕ್ಕೆ 25 ಲಕ್ಷರು ಚೆಕ್​ ವಿತರಣೆ

Team Newsnap
1 Min Read

ಶಿವಮೊಗ್ಗದಲ್ಲಿ ಹತ್ಯೆಯಾದ ಭಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರ ಮಾಡಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಬಿಎಸ್​ವೈ ಹಿಂದು ಸಂಘಟನೆ ಕಾರ್ಯಕರ್ತ ಹರ್ಷನ ಕೊಲೆ ಖಂಡನೀಯ. ಹಿಂದೂ ಸಮಾಜದ ಮುಖಂಡನಾಗಿ ಬೆಳೆಯುತ್ತಿದ್ದ ಹರ್ಷನ ಬೆಳವಣಿಗೆಯನ್ನು ಸಹಿಸಲಾಗದೆ ಕೊಲೆ ಮಾಡಲಾಗಿದೆ ಎಂದರು.

ಯಾರ ತಂಟೆಗೂ ಹೋಗದೇ ತನ್ನ ಪಾಡಿಗೆ ತಾನಿದ್ದ ಹರ್ಷನನ್ನು ಕೊಲೆ ಮಾಡಿರುವುದು ದುಃಖದ ವಿಷಯ ಎಂದು ಬೇಸರ ವ್ಯಕ್ತಪಡಿಸಿದರು.

ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುವುದನ್ನು ಬಿಟ್ಟು ಬೇರೇನೂ ಮಾಡಲಾಗದು. ಎಷ್ಟೇ ಹಣ ನೀಡಿದರೂ ಅದು ನೆಪಮಾತ್ರಕ್ಕೆ ಅಷ್ಟೇ. ಇಂತಹ ಘಟನೆಗಳು ರಾಜ್ಯದಲ್ಲಿ ಮರುಕಳಿಸಬಾರದು ಎಂದರು

ಪ್ರಧಾನಿ ಮೋದಿ ಸಹ ಈ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು ಒಟ್ಟಾಗಿ ಬಾಳಬೇಕು ಎಂಬುದು ನಮ್ಮೆಲ್ಲರ ಆಶಯ ಎಂದು ಹೇಳಿದರು.

Share This Article
Leave a comment