ಮೃತರ ಕುಟುಂಬಗಳಿಗೆ 25 ಲಕ್ಷ, ಸರ್ಕಾರಿ ಉದ್ಯೋಗಕ್ಕೆ ಬಿಎಸ್ಪಿ ರಾಜ್ಯಾಧ್ಯಕ್ಷರ ಆಗ್ರಹ

Team Newsnap
1 Min Read

ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೆ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ. 25 ಲಕ್ಷ ಪರಿಹಾರ ಹಾಗೂ ಪ್ರತಿ ಕುಟುಂಬಕ್ಕೊಂದು ಸರ್ಕಾರಿ ಉದ್ಯೋಗ ನೀಡಬೇಕೆಂದು ಬಹುಜನ ಸಮಾಜ ಪಕ್ಷದ ರಾಜ್ಯ ಅಧ್ಯಕ್ಷ ಎಂ. ಕೃಷ್ಣಮೂರ್ತಿ ಆಗ್ರಹಿಸಿದರು.

ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಅವರು, ಕೋವಿಡ್ ನಿರ್ವಹಣೆ ಯಲ್ಲಿ ಸರ್ಕಾರ ಸಂಪೂರ್ಣ ವಾಗಿ ವಿಫಲವಾಗಿದೆ. ಹೀಗೆ ಮುಂದುವರಿದರೆ ಲಕ್ಷಾಂತರ ಜನ ಪ್ರಾಣ ಕಳೆದು ಕೊಳ್ಳಬೇಕಾಗುತ್ತದೆ.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ಜಿಲ್ಲಾಧ್ಯಕ್ಷ ನಾಗಯ್ಯ, ಉಪಾಧ್ಯಕ್ಷ ಬಸವಣ್ಣ, ಪ್ರಧಾನ ಕಾರ್ಯದರ್ಶಿ ಬ.ಮಾ. ಕೃಷ್ಣಮೂರ್ತಿ ರಾಜೇಂದ್ರ, ಆಶ್ರಿತ್, ಪ್ರಕಾಶ್ ಮುಂತಾದವರು ಇದ್ದರು.

ಬಿಎಸ್ಪಿಯ ಪ್ರಮುಖ ಬೇಡಿಕೆಗಳು :

  • ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿ, ಮೂವರು ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಸಚಿವರ ನೇತೃತ್ವದಲ್ಲಿ ಕಾರ್ಯಪ…

Join Newsnap WhatsApp group

https://chat.whatsapp.com/CCR8jY9CI6HGUbm5jWYjSe

LATEST POST

Share This Article
Leave a comment