Karnataka

ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ; 23 ಮಂದಿಗೆ ಟಿಕೆಟ್ : 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.

ಎರಡನೇ ಪಟ್ಟಿಯಲ್ಲಿ 7 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಒಟ್ಟು 23 ಮಂದಿಗೆ ಟಿಕೆಟ್ ಘೋಷಿಸಲಾಗಿದೆ. ಎರಡನೇ ಪಟ್ಟಿಯಲ್ಲೂ ಮೈಸೂರಿನ ಕೆಆರ್ ಕ್ಷೇತ್ರದ ಟಿಕೆಟ್ ಘೋಷಣೆಯಾಗಿಲ್ಲ. ಇದು ಹಾಲಿ‌ ಶಾಸಕ ಎಸ್​​ಎ ರಾಮದಾಸ್ ಪ್ರತಿನಿಧಿಸುವ ಕ್ಷೇತ್ರವಾಗಿದೆ. ರಾಮದಾಸ್​ಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರು ಬುಧವಾರ ವಿಷ ಸೇವಿಸುವ ಯತ್ನವನ್ನೂ ಮಾಡಿದ್ದರು.

ಎರಡನೇ ಪಟ್ಟಿಯಲ್ಲೂ ಜಗದೀಶ್ ಶೆಟ್ಟರ್ ಹೆಸರು ಕಂಡುಬಂದಿಲ್ಲ. ಬುಧವಾರವಷ್ಟೇ ಅವರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸಿ ಬಂದಿದ್ದರು.

ಎರಡನೇ ಪಟ್ಟಿಯಲ್ಲಿ ಯಾರಿಗೆಲ್ಲ ಬಿಜೆಪಿ ಟಿಕೆಟ್?

  • ದೇವರ್ ಹಿಪ್ಪರಗಿ – ಸೋಮನಗೌಡ ಪಾಟೀಲ್ (ಸಾಸನೂರು)
  • ಬಸವನ ಬಾಗೇವಾಡಿ – ಎಸ್​ಕೆ ಬೆಳ್ಳುಬ್ಬಿ
  • ಇಂಡಿ – ಕಾಸಗೌಡ ಬಿರದಾರ್ಗು
  • ರುಮಿಟ್ಕಲ್ – ಲಲಿತ ಅನಾಪುರ್ಬೀ
  • ದರ್ – ಈಶ್ವರ್ ಸಿಂಗ್ ಠಾಕೂರ್
  • ಬಾಲ್ಕಿ- ಪ್ರಕಾಶ್ ಖಂಡ್ರೆ
  • ಗಂಗಾವತಿ – ಪ್ರಸನ್ನ ಮುನವಳ್ಳಿ
  • ಕಲಘಟಗಿ – ನಾಗರಾಜ್ ಛಬ್ಬಿ
  • ಹಾನಗಲ್ – ಶಿವರಾಜ್ ಸಜ್ಜನರ್
  • ಹಾವೇರಿ (ಎಸ್​ಸಿ) – ಗವಿಸಿದ್ದಪ್ಪ ದ್ಯಾಮಣ್ಣನವರ್
  • ಹರಪ್ಪನಹಳ್ಳಿ – ಕರುಣಾಕರ ರೆಡ್ಡಿ
  • ದಾವಣಗೆರೆ ಉತ್ತರ – ಲೋಕಿಕೆರೆ ನಾಗರಾಜ್
  • ದಾವಣಗೆರೆ ದಕ್ಷಿಣ – ಅಜಯ್ ಕುಮಾರ್
  • ಮಾಯಕೊಂಡ (ಎಸ್​ಸಿ) – ಬಸವರಾಜ ನಾಯ್ಕ್
  • ಚನ್ನಗಿರಿ – ಶಿವಕುಮಾರ್
  • ಬೈಂದೂರು – ಗುರುರಾಜ್ ಗಂಟಿಹೊಳೆ
  • ಮೂಡಿಗೆರೆ (ಎಸ್​ಸಿ) – ದೀಪಕ್ ದೊಡ್ಡಯ್ಯ
  • ಗುಬ್ಬಿ – ಎಸ್​ಡಿ ದಿಲೀಪ್ ಕುಮಾರ್
  • ಶಿಡ್ಲಘಟ್ಟ – ರಾಮಚಂದ್ರ ಗೌಡ
  • ಕೆಜಿಎಫ್ (ಎಸ್​ಸಿ) – ಅಶ್ವಿನಿ ಸಂಪಂಗಿ
  • ಶ್ರವಣಬೆಳಗೊಳ- ಚಿದಾನಂದ
  • ಅರಸಿಕೆರೆ- ಜಿವಿ ಬಸವರಾಜು
  • ಹೆಗ್ಗಡದೇವನಕೋಟೆ- ಕೃಷ್ಣ ನಾಯ್ಕ್

ವಯಸ್ಸಿನ ಕಾರಣಕ್ಕೆ 7 ಹಾಲಿ ಶಾಸಕರಿಗೆ ಟಿಕೆಟ್ ನೀಡಿಲ್ಲ ಎರಡನೇ ಪಟ್ಟಿಯಲ್ಲೂ ಜಗದೀಶ್ ಶೆಟ್ಟರ್ ಹೆಸರು ಕಂಡುಬಂದಿಲ್ಲ. ಶೆಟ್ಟರ್ ಕ್ಷೇತ್ರದ ಅಭ್ಯರ್ಥಿ ಬಾಕಿ ಇರಿಸಲಾಗಿದೆ. ಸಿದ್ದು ವಿರುದ್ಧ ಸೋಮಣ್ಣ, ಬಂಡೆ ವಿರುದ್ಧ ಸಾಮ್ರಾಟ್

ಕಲಘಟಗಿ ಹಾಲಿ ಶಾಸಕ ನಿಂಬಣ್ಣವರಿಗೆ ಟಿಕೆಟ್ ಮಿಸ್ ಆಗಿದೆ. ಸಚಿವ ಸೋಮಣ್ಣ ಪುತ್ರ ಅರುಣ್ ಸೋಮಣ್ಣಗೆ ಟಿಕೆಟ್‌ ಘೊಷಣೆಯಾಗಿಲ್ಲ. ಅವರು ಗುಬ್ಬಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆ ಕ್ಷೇತ್ರಕ್ಕೆ ಎಸ್​ಡಿ ದಿಲೀಪ್ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು ಹಾಲಿ ಶಾಸಕ ಸುಕುಮಾರ್ ಶೆಟ್ಟಿಗೆ ಟಿಕೆಟ್ ನೀಡಿಲ್ಲ. ಬಿಎಸ್‌ವೈ ಸಂಬಂಧಿ ಎನ್‌.ಆರ್‌.ಸಂತೋಷ್‌ ಅವರಿಗೂ ಟಿಕೆಟ್ ನೀಡಿಲ್ಲ. ಇವರು ಅರಸೀಕೆರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

Team Newsnap
Leave a Comment

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024