ಶ್ರೀರಂಗಪಟ್ಟಣ :
ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯ ಗಣಂಗೂರು ಬಳಿ ಇರುವ ಟೋಲ್ ಸಂಗ್ರಹ ಕೇಂದ್ರದಲ್ಲಿ
ಇಂದಿನಿಂದ ವಾಹನಗಳಿಗೆ ಟೋಲ್ ಸಂಗ್ರಹ ಮಾಡಲಾಗುತ್ತಿದೆ, ದಶಪಥ ಹೆದ್ದಾರಿಯ 2ನೇ ಟೋಲ್ ಇದಾಗಿದೆ.
ಟೋಲ್ ಸಂಗ್ರಹಕ್ಕೆ ಭಾರಿ ವಿರೋಧದ ನಡುವೆಯೂ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವು 2 ಟೋಲ್ನಲ್ಲಿ ಶುಲ್ಕ ಸಂಗ್ರಹಕ್ಕೆ ಆರಂಭ ಮಾಡಿದೆ.
ಮಂಡ್ಯ ಭಾಗದ ಶಾಸಕರು ಹಾಗೂ ಸಾರ್ವಜನಿಕರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ.
ಸವಾರರು ಸೇರಿದಂತೆ ಸ್ಥಳೀಯರು ಕಿಡಿ ಕಾರಿದ್ದಾರೆ. ಈಗ ತಾನೆ ರಾಮನಗರದ ಕಣಮಿಣಕಿ ಟೋಲ್ ಆರಂಭ ಮಾಡಲಾಗಿದೆ. ಈಗಾಗಲೇ ಇಲ್ಲಿ ಶುಲ್ಕ ಪಾವತಿ ಮಾಡಲಾಗುತ್ತಿದೆ. ದಶಪಥ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಆದ್ರೂ ಒಂದು ಟೋಲ್ನ ಶುಲ್ಕ ಹೊರೆ ಬೀಳುತ್ತಿದೆ. ಈ ಹೊತ್ತಿನಲ್ಲಿ 2 ಟೋಲ್ ಶುರು ಮಾಡಿ ವಸೂಲಿ ಮಾಡುವುದು ಸರಿಯಲ್ಲ ಎಂದು ಸವಾರರು ಹೇಳುತ್ತಿದ್ದಾರೆ. ಹೀಗಾಗಿ ಇಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ.
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
- ರಾಷ್ಟ್ರೀಯ ಮತದಾರರ ದಿನ (ಜನವರಿ 25)
- ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
More Stories
ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
“ನಮ್ಮನ್ನು ಅನವಶ್ಯಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ” – ಪ್ರಮೋದಾ ದೇವಿ ಒಡೆಯರ್
”ಹೆಣ್ಣು ಬೇಕು!”