ಮೃತ ಗಂಡನ ನಕಲಿ ದಾಖಲೆ ನೀಡಿ ಮೂರು ಕೋಟಿ ವಿಮೆ ಹಣ ಪಡೆದುಕೊಂಡ ಪತ್ನಿ ವಿರುದ್ಧ ವಿಮಾ ಕಂಪನಿ ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಟ್ವಸ್ಟ್ ಸಿಕ್ಕಿದೆ.
ಮೃತ ಕೃಷ್ಣ ಪ್ರಸಾದ್ ಗಾರಲಪಟ್ಟಿ ಎಂಬುವವರು ಟಾಟಾ ಎಐಎ ಲೈಫ್ ಇನ್ಶ್ಯೂರೆನ್ಸ್ ಕಂಪನಿಯಲ್ಲಿ ವರ್ಷಕ್ಕೆ 51,777 ರೂಗಳನ್ನು ಕಟ್ಟುವ ಪಾಲಿಸಿ ಪಡೆದಿದ್ದರು.
ಆದರೆ ಮೂರು ವರ್ಷ ಪಾಲಿಸಿ ಕಟ್ಟುವ ಮುನ್ನವೇ ಸುಪ್ರಿಯಾ ಪತಿ ಮೃತಪಟ್ಟಿದ್ದರು. ಹೆಂಡತಿ ಸುಪ್ರಿಯಾರನ್ನು ನಾಮಿನಿ ಮಾಡಿದ್ದ ಕಾರಣ, ಅದನ್ನೇ ದುರುಪಯೋಗ ಪಡಿಸಿಕೊಂಡ ಪತ್ನಿ ತನ್ನ ಗಂಡ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅನ್ಲೈನ್ ಮೂಲಕ ವಿಮೆ ಹಣಕ್ಕಾಗಿ ಕ್ಲೈಮ್ ಮಾಡಿ 3 ಕೋಟಿ ಹಣವನ್ನು ಪಡೆದಿದ್ದರು.
ಸುಪ್ರಿಯಾ ಅಕೌಂಟ್ ಫ್ರೀಜ್
ಸುಳ್ಳು ಮಾಹಿತಿ ಹಾಗೂ ನಕಲಿ ದಾಖಲೆ ನೀಡಿ 3 ಕೋಟಿ ಕ್ಲೈಮ್ ಮಾಡಿದ್ದಾರೆ ಎಂಬುದು ಇನ್ಶ್ಯೂರೆನ್ಸ್ ಕಂಪನಿಗೆ ತಡವಾಗಿ ತಿಳಿದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಮೃತನ ಪತ್ನಿಯ ವಿರುದ್ಧ ಇನ್ಶ್ಯೂರೆನ್ಸ್ ಕಂಪನಿ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಆರೋಪಿ ಸುಪ್ರಿಯಾ ಅಕೌಂಟ್ನಲ್ಲಿರುವ ಹಣವನ್ನು ಫ್ರೀಜ್ ಮಾಡಿದ್ದಾರೆ. ಕಳೆದ ವರ್ಷ ಡಿಸೆಂಬರ್ನಲ್ಲಿ ಇನ್ಶ್ಯೂರೆನ್ಸ್ ಕಂಪನಿಯಿಂದ ಪಡೆದಿದರು.
ಮೂರು ಕೋಟಿ ಹಣದ ಪೈಕಿ ಇದುವರೆಗೆ ಸುಮಾರು 45 ಲಕ್ಷ ಹಣವನ್ನು ಸುಪ್ರಿಯಾ ಡ್ರಾ ಮಾಡಿರುವುದು ತಿಳಿದು ಬಂದಿದೆ.
ಮೂರು ಕೋಟಿ ಹಣದ ಪೈಕಿ, ಸುಪ್ರಿಯಾಳ HDFC ಅಕೌಂಟ್ ನಿಂದ 2.55 ಕೋಟಿ ಹಣವನ್ನು ಫ್ರೀಜ್ ಮಾಡಲಾಗಿದೆ. ಹೆಚ್ಚಿನ ಹಣ ಆರೋಪಿತೆಯ ಕೈಗೆ ಸಿಗದ ರೀತಿ ತಡೆಯಲೆಂದೇ ಪೊಲೀಸರು ಸುಪ್ರಿಯಾಳ ಅಕೌಂಟ್ ಫ್ರೀಜ್ ಮಾಡಿದ್ದಾರೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment