ರಾಜ್ಯದಲ್ಲಿ ಅಕ್ಷರ ದಾಸೋಹ ಯೋಜನೆಯಡಿಯ ಕೆಲಸ ಮಾಡುವ ಅಡುಗೆ ಸಿಬ್ಬಂದಿಗಳಿಗೆ ಮೂರು ತಿಂಗಳ ಬಾಕಿ ವೇತನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ಮತ್ತು ಪದನಿಮಿತ್ತ ಸರ್ಕಾರ ಅಧೀನ ಕಾರ್ಯದರ್ಶಿ ಎಸ್ ಆರ್ ಎಸ್ ನಾಧನ್ ನಡಾವಳಿ ಆದೇಶ ಹೊರಡಿಸಿದ್ದಾರೆ.
2020-21ನೇ ಸಾಲಿಗೆ ರಾಷ್ಟ್ರೀಯ ಕಾರ್ಯಕ್ರಮದಡಿ ಪ್ರಾಥಮಿಕ ಶಿಕ್ಷಣಕ್ಕೆ ಪೌಷ್ಠಿಕ ಆಹಾರ ಬೆಂಬಲ ಕಾರ್ಯಕ್ರಮದಡಿ ಮಧ್ಯಾಹ್ನದ ಉಪಹಾರ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ 1,17,999 ಅಡುಗೆ ಸಿಬ್ಬಂದಿಗಳಿಗೆ ಸೆಪ್ಟೆಂಬರ್-2020 ರಿಂದ ನವೆಂಬರ್ -2020ರವರೆಗೆ 3 ತಿಂಗಳ ಗೌರವ ಸಂಭಾವನೆಯನ್ನು ಪಾವತಿಸಲು ರೂ.9,345.76 ಲಕ್ಷಗಳ ರು ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.