ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Team Newsnap
1 Min Read
Three people from the same family committed suicide in Bangalore ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೋಣಕುಂಟೆಯಲ್ಲಿ ಜರುಗಿದೆ ಮಹೇಶ್ (44) ಪತ್ನಿ ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಆತ್ಮಹತ್ಯೆ ಮಾಡಿಕೊಂಡವರು.

ಮಹೇಶ್ ಗೌಡ ಕ್ಯಾನ್ಸರ್​​ನಿಂದ ಬಳಲುತ್ತಿದ್ದರಂತೆ. ಒಂದು ವೇಳೆ ಕ್ಯಾನ್ಸರ್​ನಿಂದ ಸಾವನ್ನಪ್ಪಿದರೆ ಕುಟುಂಬ ಅನಾಥವಾಗುತ್ತೆ. ಪತ್ನಿ, ಮಗು ಎಲ್ಲರೂ ಬೀದಿಗೆ ಬರುತ್ತಾರೆ ಎಂದು ಹೆದರಿ ಮಹೇಶ್ ಗೌಡ ಹೆದರಿದ್ದಾನೆ. ನಂತರ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನು ಓದಿ –ಖ್ಯಾತ ಹಾಸ್ಯನಟ ‘ರಾಜು ಶ್ರೀವಾತ್ಸವ್’ ಇನ್ನಿಲ್ಲ

ಮಹೇಶ್ ಕಳೆದ ಒಂದು ವಾರದಿಂದ ಹೊಟ್ಟೆನೋವಿಂದ ಬಳಲುತ್ತಿದ್ದರು. ಪ್ರತಿದಿನ ಟ್ಯಾಬ್ಲೆಟ್ ತೆಗೆದುಕೊಂಡು ಸುಸ್ತಾಗಿ ಹೋಗಿದ್ದರು. ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚೆಕ್ ಮಾಡಿಸಿದಾಗ ಕ್ಯಾನ್ಸರ್ ಇರೋದು ಗೊತ್ತಾಗಿದೆ ಎನ್ನಲಾಗಿದೆ. ಮಹೇಶ್ ಬಿಬಿಎಂಪಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

Share This Article
Leave a comment