ಕೊಡಗು ಸಮೀಪದ ತೊರೆನೂರು ಬಳಿಯ ಹಾರಂಗಿ ಎಡದಂಡೆ ನಾಲೆಯಲ್ಲಿ ಮೂವರು ಮಕ್ಕಳ ಶವ ಪತ್ತೆಯಾಗಿದೆ.
ಇಬ್ಬರು ಗಂಡು ಮಕ್ಕಳು ಹಾಗೂ ಒಂದು ಹೆಣ್ಣು ಮಗುವಿನ ಮೃತದೇಹ ನಾಲೆಯ ನೀರಿನಲ್ಲಿ ತೇಲಿಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಮೇಲಕ್ಕೆ ಎತ್ತಿದ್ದಾರೆ.
ಹಾಸನದ ಅರಕಲಗೂಡು ತಾಲೂಕು ಅರಗಲ್ಲು ಗ್ರಾಮದ ಚೆನ್ನಮ್ಮ ಎಂಬಾಕೆಗೆ ಮೂವರು ಮಕ್ಕಳು. ಶುಂಠಿ ಕೀಳಲು ಆಕೆ ಮೂವರು ಮಕ್ಕಳೊಂದಿಗೆ ಹೊಲಕ್ಕೆ ಬಂದಿದ್ದಳು. ಬಟ್ಟೆ ಒಗೆಯಲು ಆಕೆ ಮೂವರು ಮಕ್ಕಳೊಂದಿಗೆ ಹಾರಂಗಿ ಎಡದಂಡೆ ನಾಲೆಗೆ ಹೋಗಿದ್ದಾಳೆ.
ಅ ಸಮಯದಲ್ಲಿ 5 ವರ್ಷದ ವಿಜಯ್, 3 ವರ್ಷದ ವಿನಯ್ ಮತ್ತು ಒಂದೂವೆರ ವರ್ಷದ ದೀಕ್ಷಾ ನಾಲೆಯಲ್ಲಿ ಮುಳುಗಿ ಸಾವ್ನಪ್ಪಿವೆ. ಆದರೆ ತಾಯಿ ಚೆನ್ನಮ್ಮ ಮಾತ್ರ ನಾಪತ್ತೆಯಾಗಿದ್ದಾಳೆ.
ಮೂವರು ಮಕ್ಕಳೊಂದಿಗೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೇ? ಅಥವಾ ಮಕ್ಕಳೇ ಆಟವಾಡಲು ಹೋಗಿ ಕಾಲು ಜಾರಿ ನಾಲೆಗೆ ಬಿದ್ದರೆ ಎಂಬುದೂ ಖಚಿತವಾಗಿಲ್ಲ.
ಹಾರಂಗಿ ಜಲಾಶಯಕ್ಕೆ ನೀರು ಹರಿಸುವುದನ್ನು ಸ್ಥಗಿತ ಮಾಡಿ, ಶೋಧ ನಡೆಸಲಾಗುತ್ತಿದೆ. ಮಕ್ಕಳು ಎಲ್ಲಿಯವರು ಎಂಬುದು ಪತ್ತೆಯಾಗಿಲ್ಲ. ಮಕ್ಕಳ ದಿನಾಚರಣೆಯಂದೇ ಈ ದುರ್ಘಟನೆ ನಡೆದಿದೆ.
ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಾಯಿ ಚೆನ್ನಮ್ಮನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
This website uses cookies.
Leave a Comment