ಮುಂಬೈನ ಅತಿ ಶ್ರೀಮಂತ ಗಣಪತಿ ಮಂಡಲ ಎಂಬ ಹಿರಿಮೆ ಹೊಂದಿರುವ ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್ಬಿ) ಸೇವಾ ಮಂಡಲದ ಗಣೇಶನಿಗೆ ಈ ವರ್ಷ ದಾಖಲೆಯ 316.40 ಕೋಟಿ ರೂ. ವಿಮೆ ಮಾಡಿರುವುದು ವಿಶೇಷವಾಗಿದೆ.
ಜೆಎಸ್ಬಿ ಮಂಡಲ್ ಗಣೇಶನಿಗೆ ತೊಡಿಸುವ 66 ಕೆಜಿ ಚಿನ್ನಾಭರಣ, 295 ಕೆಜಿ ಬೆಳ್ಳಿ, ಹಾಗೂ ಇನ್ನಿತರ ಬೆಲೆಬಾಳುವ ಆಭರಣಗಳಿಗೆ ನ್ಯೂ ಇಂಡಿಯಾ ಅಶ್ಯುರೆನ್ನಿಂದ 31.97 ಕೋಟಿ ರೂ. ಮೊತ್ತದ ಇನ್ಶೂರೆನ್ಸ್ ಮಾಡಿಸಲಾಗಿದೆ.
ಭದ್ರತಾ ಸಿಬ್ಬಂದಿ, ಅರ್ಚಕರು, ಅಡುಗೆ ಮಾಡುವವರು, ಸ್ವಯಂ ಸೇವಕರಿಗಾಗಿ ಒಟ್ಟು 263 ಕೋಟಿ ರೂ. ವಿಮೆ ಮಾಡಿಸಲಾಗಿದೆ.
ಗಣೇಶೋತ್ಸವ ವೇಳೆ ಅನಾಹುತಗಳಾದಲ್ಲಿ ಪರಿಹಾರವಾಗಿ 1 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಜೊತೆಗೆ ಸಾರ್ವಜನಿಕ ಹೊಣೆಗಾರಿಕೆ ಅಡಿಯಲ್ಲಿ ಭಕ್ತರು, ಗಣಪತಿ ಕೂರಿಸುವ ಪೆಂಡಾಲ್, ಕ್ರೀಡಾಂಗಣ ಸೇರಿ ಇನ್ನಿತರ ಎಂದು 20 ಕೋಟಿ ರೂ. ವಿಮೆ ಮಾಡಿಸಲಾಗಿದೆ.
ಅದ್ಧೂರಿ ಗಣೇಶೋತ್ಸವಕ್ಕೆ ಜಿಎಸ್ಬಿ ಸಮಿತಿ ಮುಂದಾಗಿದ್ದು, ಈ ವರ್ಷ ಪೂಜೆ, ಪ್ರಸಾದ ಸೇರಿದಂತೆ ಇತರ ವ್ಯವಸ್ಥೆಗಳಿಗೆ ಕ್ಯೂ ಆರ್ ಕೋಡ್ ಸ್ಕ್ಯಾನ್ ಮೂಲಕ ಡಿಜಿಟಲ್ ವ್ಯವಸ್ಥೆಗೆ ಒತ್ತು ನೀಡಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ