ಮೈಸೂರು ಜಿಲ್ಲೆಯಲ್ಲಿ ಚಿರತೆಗಳ ದಾಳಿಗೆ ಮತ್ತೊಂದು ಬಲಿಯಾಗಿದೆ.
ನರಸೀಪುರ ತಾಲೂಕಿನ ಕನ್ನನಾಯಕನಹಳ್ಳಿಯಲ್ಲಿ ದಾಳಿ ನಡೆಸಿದ ನರಹಂತಕ ಚಿರತೆ, ಗ್ರಾಮದ ಸಿದ್ದಮ್ಮ ಎಂಬ 60 ವರ್ಷದ ವೃದ್ಧೆಯನ್ನು ಸಾಯಿಸಿದೆ.ಪಿಎಸ್ ಐ ಹಗರಣ: ರುದ್ರಗೌಡ ಪಾಟೀಲ್ CID ಅಧಿಕಾರಿಗಳಿಂದ ಎಸ್ಕೇಪ್
ಮೂರನೇ ಬಲಿ ಇದಾಗಿದೆ. ಸಿದ್ದಮ್ಮ ಮನೆಯಾಚೆಯಿದ್ದ ಸೌದೆ ತರಲೆಂದು ಹೊರಗೆ ಬಂದಿದ್ದ ವೇಳೆ ಚಿರತೆ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.
ದಾಳಿ ಮಾಡಿದ್ದಲ್ಲದೇ ವೃದ್ಧೆ ಸಿದ್ದಮ್ಮಳನ್ನು ಎಳೆದೊಯ್ದಿದೆ. ಈ ವೇಳೆ ಗ್ರಾಮಸ್ಥರು ಕಿರುಚಾಡಿದ ಹಿನ್ನೆಲೆ ಸ್ಥಳದಲ್ಲಿಯೇ ಮಹಿಳೆಯ ದೇಹ ಬಿಟ್ಟು ಕಾಲ್ಕಿತ್ತಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಡೆದು ಗಂಟೆಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ಸಿದ್ದಮ್ಮಳ ಮೃತ ದೇಹವನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡುವ ಸಾಧ್ಯತೆ ಇದೆ.
ಅಕ್ಟೋಬರ್ 31 ತಾಲೂಕಿನ ಮದ್ಗಾರ್ ಲಿಂಗಯ್ಯನಹುಂಡಿ ಗ್ರಾಮದ ಬಳಿ ದಾಳಿ ಮಾಡಿದ್ದ ನರಹಂತಕ ಚಿರತೆ ಮಂಜುನಾಥ್ (18) ಎಂಬ ಯುವಕನನ್ನು ಬಲಿ ತಡೆದುಕೊಂಡಿತ್ತು. ಅದಾದ ಬಳಿಕ ಡಿಸೆಂಬರ್ 1 ರಂದು ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ದಾಳಿ ಮಾಡಿ ಮೇಘನಾ (22) ಎಂಬ ಯುವತಿ ಬಲಿ ಪಡೆದಿತ್ತು. ಇದೀಗ ಮೂರನೇ ಬಲಿ ತೆಗೆದುಕೊಂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು