ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದವರ ಆಕ್ರೋಶ ಇನ್ನು ತಣ್ಣಗಾಗಿಲ್ಲ ಎಂಬುದನ್ನು, ಇಂದು ಚಿತ್ರದುರ್ಗದಲ್ಲಿ ಸಚಿವರ ಸಮ್ಮುಖದಲ್ಲಿ ನಡೆದ ಮಹತ್ವ ಸಭೆಗೆ ನಾಲ್ವರು ಬಿಜೆಪಿ ಶಾಸಕರು ಗೈರುಹಾಜರಾಗುವ ಮೂಲಕ ತೋರಿಸಿದ್ದಾರೆ.
ಸಾರಿಗೆ ಸಚಿವರಾದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಮೊದಲ ಬಾರಿಗೆ ಕೋಟೆನಾಡು ಚಿತ್ರದುರ್ಗಕ್ಕೆ ಬಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್-೧೯ರ ಸಂಭಾವ್ಯ ೩ನೇ ಅಲೆ ಹಾಗೂ ನೆರೆಹಾವಳಿ ಬಗ್ಗೆ ಸಭೆ ನಡೆಸಿದರು. ಆದರೆ ಈ ಪ್ರಮುಖ ಸಭೆಗೆ ಬಿಜೆಪಿ ನಾಲ್ವರು ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಗೂಳಿಹಟ್ಟಿ ಡಿ. ಶೇಖರ್, ಎಂ. ಚಂದ್ರಪ್ಪ ಆಗಮಿಸಲಿಲ್ಲ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ