January 28, 2026

Newsnap Kannada

The World at your finger tips!

lake 1

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

Spread the love

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು ಮೃತ ನಾಲ್ಕು ಮಕ್ಕಳು ಮುತ್ತಿಗೆ ಗ್ರಾಮದವರಾಗಿದ್ದಾರೆ.

ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಕೆರೆಯಲ್ಲಿ ಮೀನು ಹಿಡಿದು , ಈಜಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ.

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಶಾಸಕ ಮಂಜು, ಆಲೂರು ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಕಾರ್ಯಚರಣೆ ನಡೆಸುತ್ತಿದ್ದಾರೆ.ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಘಟನಾ ಸ್ಥಳದಲ್ಲಿ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

error: Content is protected !!