Karnataka

ಪಾವಗಡ ಬಸ್​​ ದುರಂತ : ಮೃತಪಟ್ಟ 8 ಮಂದಿ ಪೈಕಿ ನಾಲ್ವರು ವಿದ್ಯಾರ್ಥಿಗಳು

ಡ್ರೈವರ್​​ ಅತಿವೇಗದ ಚಾಲನೆಯೇ ಖಾಸಗಿ ಬಸ್​ ಭೀಕರ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ವೈ.ಎಸ್​​ ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ತಿರುವಿನಲ್ಲಿ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಸಾವಿನ ಸಂಖ್ಯೆ ಏರುತ್ತಲೇ ಇದೆ.

ಈಗ ಪಾವಗಡದಲ್ಲಿ ಖಾಸಗಿ ಬಸ್​ ದುರಂತದಲ್ಲಿ ಮೃತಪಟ್ಟ ನಾಲ್ಕು ಮಂದಿಯ ಗುರುತು ಪತ್ತೆಯಾಗಿದೆ.

ವೈ.ಎನ್ ಹೊಸಕೋಟೆ ಮೂಲದ ಕಲ್ಯಾಣ್ (18), ಅಮೂಲ್ಯ (17), ಅಜಿತ್ (21), ಶಾ ನವಾಜ್ (19) ಮೃತರು ಎನ್ನಲಾಗಿದೆ.
ಇವರೆಲ್ಲೂ ಪಾವಗಡ ಜೂನಿಯರ್ ಕಾಲೇಜ್ ವಿದ್ಯಾರ್ಥಿಗಳು ಎನ್ನಲಾಗಿದೆ.

ಎರಡು ಬಸ್​ ಜನರನ್ನು ಒಂದೇ ಬಸ್ ನಲ್ಲಿ ತುಂಬಿಸಿಕೊಂಡು ಡ್ರೈವರ್​ ಬಸ್​​ ಚಲಾಯಿಸುತ್ತಿದ್ದ.

ಬಸ್​​​​ ಟಾಪ್ ಮೇಲೆ, ಒಳಗೆ ತುಂಬಿ ತುಳುಕುತ್ತಿದ್ದರು ಪ್ರಯಾಣಿಕರು. ಇಷ್ಟೊಂದು ಪ್ರಮಾಣದ ಜನರಿದ್ರೂ ಡ್ರೈವರ್​​​​ ಅತೀ ವೇಗವಾಗಿ ಬಸ್​​ ಚಲಾಯಿಸಿದ್ದಾರೆ.

ಆಗ ಎಸ್​​ಟಿವಿ ಬಸ್​​ ಹೆದ್ದಾರಿಯ ತಿರುವಿನಲ್ಲಿ ದಿಢೀರನೇ ಉರುಳಿ ಬಿದ್ದಿದೆ.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024