January 30, 2026

Newsnap Kannada

The World at your finger tips!

old mysuru , BJP Parva , CM

BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ನೆರೆ ಸಂತ್ರಸ್ತರಿಗೆ, ಮಳೆ ಹಾನಿ ಪರಿಹಾರಕ್ಕೆ 418.72 ಕೋಟಿ ರು ಬಿಡುಗಡೆ – ಸಿಎಂ ಆದೇಶ

Spread the love

ರಾಜ್ಯದಲ್ಲಿನ ನೆರೆ ಸಂತ್ರಸ್ಥರಿಗೆ ಹಾಗೂ ಮನೆ, ಬೆಳೆ ಹಾನಿಯಾದವರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ.

ಮಳೆ ಹಾನಿ ಪರಿಹಾರವಾಗಿ 418 ಕೋಟಿ 72 ಲಕ್ಷದ 91 ಸಾವಿರ ರು ಘೋಷಿಸಿ ಸಿಎಂ ಅಧೀಕೃತ ಆದೇಶ ಹೊರಡಿಸಿದ್ದಾರೆ.

ತುರ್ತು ಪರಿಹಾರದ ಬಳಕೆಗಾಗಿ ಎಸ್​ಡಿಆರ್​ಎಫ್​ ಹಾಗೂ ಎನ್​ಡಿಆರ್​​ಎಫ್​​​ ನಿಧಿಯಿಂದ ಈ ಪರಿಹಾರ ಬಿಡುಗಡೆ ಮಾಡಲಾಗಿದೆ

ಜಿಲ್ಲಾಧಿಕಾರಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ. ನೆರೆ ಸಂತ್ರಸ್ಥರಿಗೆ ಮತ್ತು ಮನೆ ಹಾನಿಗಳಿಗೆ ತುರ್ತು ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ ಅಲ್ಲಿ ಅಕಾಲಿಕ ಮಳೆಯಿಂದಾಗಿ ಉಂಟಾದ ಹಾನಿ ಕುರಿತು ಚರ್ಚೆ ನಡೆಸಲಿದ್ದಾರೆಂದು ಹೇಳಲಾಗಿದೆ.

ಸಂಜೆ 4 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಕಾಲಿಕ ಮಳೆಯ ಜೊತೆಗೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ವಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.

error: Content is protected !!