ರಾಜ್ಯದಲ್ಲಿನ ನೆರೆ ಸಂತ್ರಸ್ಥರಿಗೆ ಹಾಗೂ ಮನೆ, ಬೆಳೆ ಹಾನಿಯಾದವರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ.
ಮಳೆ ಹಾನಿ ಪರಿಹಾರವಾಗಿ 418 ಕೋಟಿ 72 ಲಕ್ಷದ 91 ಸಾವಿರ ರು ಘೋಷಿಸಿ ಸಿಎಂ ಅಧೀಕೃತ ಆದೇಶ ಹೊರಡಿಸಿದ್ದಾರೆ.
ತುರ್ತು ಪರಿಹಾರದ ಬಳಕೆಗಾಗಿ ಎಸ್ಡಿಆರ್ಎಫ್ ಹಾಗೂ ಎನ್ಡಿಆರ್ಎಫ್ ನಿಧಿಯಿಂದ ಈ ಪರಿಹಾರ ಬಿಡುಗಡೆ ಮಾಡಲಾಗಿದೆ
ಜಿಲ್ಲಾಧಿಕಾರಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ. ನೆರೆ ಸಂತ್ರಸ್ಥರಿಗೆ ಮತ್ತು ಮನೆ ಹಾನಿಗಳಿಗೆ ತುರ್ತು ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ ಅಲ್ಲಿ ಅಕಾಲಿಕ ಮಳೆಯಿಂದಾಗಿ ಉಂಟಾದ ಹಾನಿ ಕುರಿತು ಚರ್ಚೆ ನಡೆಸಲಿದ್ದಾರೆಂದು ಹೇಳಲಾಗಿದೆ.
ಸಂಜೆ 4 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಕಾಲಿಕ ಮಳೆಯ ಜೊತೆಗೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ವಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!