2015 ರಿಂದ 2020 ರ ಅವಧಿಯಲ್ಲಿ ನಕ್ಸಲ್ ಬಾಧಿತ ಜಿಲ್ಲೆಗಳಲ್ಲಿ ನಡೆದ ಹಿಂಸಾಕೃತ್ಯಗಳಲ್ಲಿ 380 ಭದ್ರತಾ ಸಿಬ್ಬಂದಿ, 1000 ನಾಗರಿಕರು ಮೃತಪಟ್ಟರೆ, 900ನಕ್ಸಲರು ಸತ್ತಿದ್ದಾರೆ. ಇದೇ ಅವಧಿಯಲ್ಲಿ4,200 ನಕ್ಸಲರು ಶರಣಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ಹೇಳಿವೆ.
ಮಾವೋವಾದಿಗಳಿಂದ ಹಿಂಸಾಕೃತ್ಯ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿವೆ. ನಕ್ಸಲರ ಚಟುವಟಿಕೆ 45 ಜಿಲ್ಲೆಗಳಿಗೆ ಸೀಮಿತವಾಗಿದೆ. ಆದರೂ 90 ಜಿಲ್ಲೆಗಳನ್ನು ಬಾಧಿತ ಪ್ರದೇಶಗಳು ಎಂದು ಕೇಂದ್ರ ಸರ್ಕಾರ ಗುರುತಿಸಿದೆ. ಭದ್ರತೆಗೆ ಸಂಬಂಧಿತ ಯೋಜನೆ ಜಾರಿಗೊಳಿಸುತ್ತಿದೆ ಎಂದು ಆ ಮೂಲಗಳು ತಿಳಿಸಿವೆ.
ನಕ್ಸಲ್ ಬಾಧಿತ ಆರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ನಾಲ್ಕು ರಾಜ್ಯಗಳ ಉನ್ನತ ಅಧಿಕಾರಿಗಳೊಂದಿಗೆ ಭದ್ರತಾ ಪರಿಸ್ಥಿತಿ ಕುರಿತು ಕೇಂದ್ರ ಗೃಹಸಚಿವ ಅಮಿತ್ ಶಾ ನವದೆಹಲಿಯಲ್ಲಿ ಭಾನುವಾರ ಸಭೆ ನಡೆಸಿದರು.
ನಕ್ಸಲ್ ಬಾಧಿತ ರಾಜ್ಯಗಳಲ್ಲಿರುವ ಭದ್ರತಾ ಸ್ಥಿತಿ, ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ, ಈ ಪ್ರದೇಶಗಳಲ್ಲಿನ ಅಭಿವೃದ್ಧಿ ಚಟುವಟಿಕೆ ಬಗ್ಗೆ ಚರ್ಚೆ ನಡೆಯಿತು. ಒಡಿಶಾ, ತೆಲಂಗಾಣ, ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ ಮತ್ತು ಜಾರ್ಖಂಡ್ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಪಶ್ಚಿಮಬಂಗಾಳ, ಛತ್ತೀಗಡ, ಆಂಧಪ್ರದೇಶ ಹಾಗೂ ಕೇರಳ ರಾಜ್ಯಗಳ ಮುಖ್ಯಮಂತ್ರಿಗಳ ಬದಲಿಗೆ ಆ ರಾಜ್ಯಗಳ ಸಚಿವರು ಅಥವಾ ಉನ್ನತ ಅಧಿಕಾರಿಗಳು ಬಂದಿದ್ದರು ಎಂದು ಮೂಲಗಳು ಹೇಳಿವೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment