ಬೆಂಗಳೂರು
ರಾಮನಗರ ಜಿಲ್ಲೆಯ ಮಾಗಡಿ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂ ಕುಗಳ 83 ಕೆರೆಗಳಿಗೆ ಹೇಮಾವತಿ ನದಿಯಿಂದ ಕುಡಿಯುವ ನೀರನ್ನು ಹರಿಸುವ 450 ಕೋಟಿ ರೂ. ವೆಚ್ಚದ ಪರಿಷ್ಕೃತ ಶ್ರೀರಂಗ ಏತ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟವು ಒಪ್ಪಿಗೆ ನೀಡಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ, ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ
ಈಗಾಗಲೇ ಯೋಜನೆಗೆ 277 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಯೋಜನೆಗೆ ಮತ್ತಷ್ಟು ಸಂಪನ್ಮೂಲದ ಅಗತ್ಯವಿತ್ತು. ಹೀಗಾಗಿ ಅಗತ್ಯವಿದ್ದ 173 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು ಎಂದರು.
ಮೊದಲೇ ಆರಂಭವಾಗಿದ್ದ ಯೋಜನೆಯ ಕಾಮಗಾರಿಯನ್ನು ಅತ್ಯಂತ ವೇಗಗತಿಯಲ್ಲಿ ನಡೆಸಲಾಗುತ್ತಿದೆ. ಅಗತ್ಯವಿದ್ದ ಮತ್ತಷ್ಟು ನಿರ್ವಹಣಾ ವ್ಯವಸ್ಥೆ ಹಾಗೂ ಮತ್ತಿತರೆ ಪೂರಕ ವ್ಯವಸ್ಥೆಗಳನ್ನು ಮಾಡುವ ಉದ್ದೇಶದಿಂದ ಪರಿಷ್ಕೃತ ಯೋಜನೆಗೆ ಒಪ್ಪಿಗೆ ಪಡೆಯಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.
195 ಕಿ.ಮೀ ದೂರದಿಂದ ನೀರು ಪೂರೈಕೆಯಾಗಬೇಕಿದೆ. ಅದಕ್ಕಾಗಿ ಪ್ರತ್ಯೇಕ ಪಂಪ್ ಹೌಸ್ ಮತ್ತು ವಿದ್ಯುತ್ ಸಬ್ಸ್ಟೇಷನ್ ನಿರ್ಮಿಸಲು ಉದ್ದೇಶಿಸಲಾಗಿದೆ. ಜತೆಗೆ, ನೀರನ್ನು ಸರಬರಾಜು ಮಾಡುವ ಪಿಎಸ್ಸಿ ಪೈಪುಗಳು ವಿರಳವಾಗಿದೆ. ಅವುಗಳನ್ನು ಕಾಲಮಿತಿಯೊಳಗೆ ಖರೀದಿಸಿ ಯೋಜನೆಯನ್ನು ಕಾರ್ಯಗತ ಮಾಡಬೇಕಾಗಿದೆ. ವಿವಿಧೆಡೆ ಭೂಸ್ವಾಧೀನ ಕಷ್ಟವಾಗಿರುವ ಕಾರಣ ಯೋಜನೆಯ ವೆಚ್ಚ ಹೆಚ್ಚಳವಾಗಿದೆ. ಒಟ್ಟಾರೆಯಾಗಿ ಕಾವೇರಿ ನೀರಾವರಿ ನಿಗಮ ಸಲ್ಲಿಸಿರುವ ಪರಿಷ್ಕೃತ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ ಎಂದರು.
ಹೇಮಾವತಿ ಯೋಜನೆಯ ತುಮಕೂರು ಶಾಖಾ ನಾಲೆಯಿಂದ ಎರಡು ತಾಲೂಕು ಕೆರೆಗಳಿಗೆ ನೀರು ಹರಿಯಲಿದೆ. ಈ ಯೋಜನೆಯಿಂದ ಎರಡೂ ತಾಲ್ಲೂಕುಗಳ ಜಲಕ್ಷಾಮ ಶಾಶ್ವತವಾಗಿ ನಿವಾರಣೆಯಾಗಲಿದೆ. ಇದರಿಂದ ಆ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಲಿದೆ ಹಾಗೂ ಕೃಷಿ ಚಟುವಟಿಕೆ ಉತ್ತಮವಾಗಿ ಗರಿಗೆದರಲಿದೆ ಎಂದು ಹೇಳಿದರು.
ಒಟ್ಟು ಉದ್ದೇಶಿತ ಪ್ರದೇಶಗಳಿಗೆ ಒಟ್ಟು 172.19 ಕ್ಯೂಸೆಕ್ ನೀರನ್ನು ಹರಿಸಲಾಗುವುದು. ಮಾಗಡಿ ತಾಲ್ಲೂಕಿನ 68 ಕೆರೆಗಳು ಹಾಗೂ ಕುಣಿಗಲ್ ತಾಲ್ಲೂಕಿನ ಹುತ್ತರಿದುರ್ಗ ಹೋಬಳಿಯ 15 ಕೆರೆಗಳಿಗೆ ನೀರು ಹರಿಯಲಿದೆ. ಇದರಿಂದ ಸುಮಾರು 289 ಗ್ರಾಮಗಳಲ್ಲಿ ಶಾಶ್ವತವಾಗಿ ಕುಡಿಯುವ ನೀರಿನ ಅಭಾವ ನೀಗಲಿದೆ ಎಂದರು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment