Karnataka

3 ವರ್ಷಗಳಲ್ಲಿ 49 ಹುಲಿ, 237 ಆನೆ ಸಾವು – ಸಚಿವ ಈಶ್ವರ ಖಂಡ್ರೆ

  • ಮಧು ಜಿ ಮಾದೇಗೌಡರ ಪ್ರಶ್ನೆಗೆ ಸಚಿವ ಖಂಡ್ರೆ ಉತ್ತರ

ಬೆಳಗಾವಿ : ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 49 ಹುಲಿ ಹಾಗೂ 237 ಆನೆಗಳು ಮೃತಪಟ್ಟಿವೆ. ಇದೇ ಅವಧಿಯಲ್ಲಿ ಹುಲಿ ದಾಳಿಯಿಂದ 11 ಹಾಗೂ ಆನೆಗಳ ದಾಳಿಯಿಂದ 84 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಶಾಸಕ ಮಧು ಜಿ.ಮಾದೇಗೌಡ ಅವರ ಚುಕ್ಕೆ ಗುರುತ್ತಿಲ್ಲದ ಪ್ರಶ್ನೆಗೆ ಲಿಖಿತ ನೀಡಿರುವ ಸಚಿವರು, 2020-21ರಲ್ಲಿ 14 ಹುಲಿ, 74 ಆನೆ; 2021-22ರಲ್ಲಿ 19 ಹುಲಿ, 90 ಆನೆ ಹಾಗೂ 2022-23ರಲ್ಲಿ 16 ಹುಲಿ, 73 ಆನೆಗಳು ಮೃತಪಟ್ಟಿವೆ ಎಂದು ವಿವರ ನೀಡಿದ್ದಾರೆ.

ರಾಷ್ಟ್ರೀಯ ಹುಲಿ ಗಣತಿ 2022ರ ವರದಿ ಪ್ರಕಾರ ರಾಜ್ಯದಲ್ಲಿ ಒಟ್ಟು 563 ಹುಲಿಗಳಿವೆ. 2023ನೇ ಸಾಲಿನಲ್ಲಿ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ನೇರ ವೀಕ್ಷಣೆಯಿಂದ ನಡೆದ ಆನೆ ಗಣತಿ ವರದಿಯಂತೆ ರಾಜದಲ್ಲಿ ಅಂದಾಜು 6395 ಆನೆಗಳಿವೆ. 2022-23ನೇ ಸಾಲಿನಲ್ಲಿ ಉತ್ತರ ಪ್ರದೇಶಕ್ಕೆ 4 ಹಾಗೂ ಮಧ್ಯಪ್ರದೇಶಕ್ಕೆ 14 ಬಂಧಿತ ಆನೆಗಳನ್ನು ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ‘ಪ್ರಾಜೆಕ್ಟ್ ಟೈಗರ್’ ಮತ್ತು ‘ಪ್ರಾಜೆಕ್ಟ್ ಎಲಿಫೆಂಟ್’ ಅಡಿಯಲ್ಲಿ ಹುಲಿ ಮತ್ತು ಆನೆಗಳ ಆವಾಸಸ್ಥಾನಗಳ ಸಂರಕ್ಷಣೆಗಾಗಿ ಕ್ರಮವಾಗಿ ರೂ. 6782.14 ಲಕ್ಷ ಮತ್ತು ರೂ. 1312.41 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.ಕರ್ನಾಟಕದಲ್ಲಿ ಬರ : ಕೇಂದ್ರದ ನೆರವಿಗೆ ಸಂಸದೆ ಸುಮಲತಾ ಪ್ರಧಾನಿಗೆ ಮನವಿ

ಪರಿಹಾರ : ಕಳೆದ ಮೂರು ವರ್ಷಗಳಲ್ಲಿ ಹುಲಿ ದಾಳಿಯಿಂದ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ 105 ಲಕ್ಷ ರೂಪಾಯಿ ಹಾಗೂ ಆನೆ ದಾಳಿಯಿಂದ ಮೃತಪಟ್ಟ 84 ಮಂದಿಯ ಕುಟುಂಬಗಳಿಗೆ 695 ಲಕ್ಷ ರೂಪಾಯಿಗಳ ಪರಿಹಾರ ಮೊತ್ತವನ್ನು ಪಾವತಿಸಲಾಗಿದೆ ಎಂದು ತಿಳಿಸಿದರು.

Team Newsnap
Leave a Comment
Share
Published by
Team Newsnap

Recent Posts

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024

ಅತಿಶಿ ಮರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ

ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More

September 17, 2024

ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.… Read More

September 17, 2024

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ

ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More

September 16, 2024