ನನ್ನ ವಿರುದ್ಧ 4 ತಿಂಗಳಿಂದ ಬ್ಲ್ಯಾಕ್ಮೇಲ್ ನಡೆಯುತ್ತಿತ್ತು. ನಿನ್ನನ್ನು ರಾಜಕೀಯವಾಗಿ ಮುಗಿಸ್ತೀವಿ ಎಂದು ಧಮ್ಕಿ ಹಾಕಿದ್ದರು. ನನ್ನ ಆಪ್ತ ನಾಗರಾಜ್ ಮೂಲಕ ಹಣಕ್ಕಾಗಿ ನನ್ನ ಮೇಲೆ ಒತ್ತಡ ಹಾಕಿದ್ದರು. ಆದರೆ ನಾನು ಆ ಒತ್ತಡಕ್ಕೆ ಮಣಿದಿರಲಿಲ್ಲ ಎಂದು ಹೇಳುವ ಮೂಲಕ 4 ತಿಂಗಳಿಂದ ನಡೆಯುತ್ತಿದ್ದ ರಾಸಲೀಲೆ ಸಿಡಿ ಷಡ್ಯಂತ್ರದ ಬಗ್ಗೆ ಎಸ್ಐಟಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಲವು ಮಹತ್ವದ ಮಾಹಿತಿ ಬಹಿರಂಗ ಮಾಡಿದ್ದಾರೆ.
ಸಿಡಿ ಕೇಸ್ ಸಂಬಂಧ ರಮೇಶ್ ಜಾರಕಿಹೊಳಿಯವರು 5 ಕೋಟಿ ರೂ. ಸಂದಾಯ ಮಾಡಿದರೆ ಎನ್ನುವ ಪ್ರಶ್ನೆ ಎದುರಾಗಿದೆ.
ಸಿಡಿ ತೋರಿಸಿದಾಗ ಮಾಜಿ ಸಚಿವರು 5 ಕೋಟಿ ರೂಪಾಯಿ ಹಣ ಸಂದಾಯ ಮಾಡಿದ್ದಾರೆ ಎನ್ನಲಾಗುತ್ತಿದೆ.
ಮಾಜಿ ಶಾಸಕರ ಮೂಲಕ ರಮೇಶ್ ಜಾರಕಿಹೊಳಿಯವರು ಹಂತ-ಹಂತವಾಗಿ ಹಣ ಸಂದಾಯ ಮಾಡಿದ್ದಾರೆ. ಆದರೆ ಸಿಡಿಕೋರರು ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದದ್ದರು. ಇನ್ನಷ್ಟು ಹಣ ನೀಡಲು ಮಾಜಿ ಸಚಿವರು ಹಿಂದೇಟು ಹಾಕಿದ್ದರಿಂದ ಗ್ಯಾಂಗ್ ಸಿಡಿ ಬಿಡುಗಡೆ ನಿರ್ಧರಿಸಿತ್ತು ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ಅಧಿಕಾರಿಗಳು ನಿನ್ನೆ 2 ಗಂಟೆಗಳ ಕಾಲ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ವಿಚಾರಣೆಯ ವೇಳೆ ಮಾಜಿ ಸಚಿವರು ಎಸ್ಐಟಿ ಪೊಲೀಸರ ಎದುರು 4 ಪುಟಗಳ ಹೇಳಿಕೆ ದಾಖಲಿಸಿದ್ದಾರೆ.
ಎಸಿಪಿ ಧರ್ಮೆಂದ್ರ ಎದುರು ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ರಾಜಕೀಯ ಷಡ್ಯಂತ್ರ, ಬ್ಲ್ಯಾಕ್ಮೇಲ್ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ.
ಸಿಡಿ ಬಗ್ಗೆ ಮೊದಲೇ ರಮೇಶ್ ಗೆ ಮೊದಲೇ ಗೊತ್ತಿತ್ತು ಎಂದರೆ ಆ ಸಿಡಿ ಫೇಕ್ ಆಗಲು ಸಾಧ್ಯವಿಲ್ಲ. ಅಲ್ಲದೇ ಬ್ಲ್ಯಾಕ್ ಮೇಲ್ ಗೆ ಹೆದರಿಕೊಂಡು 5 ಕೋಟಿ ರು ಕೊಡುವ ಬದಲು ಪೋಲಿಸರಿಗೆ ಏಕೆ ಮಾಹಿತಿ ಕೊಡಲಿಲ್ಲ ಎಂಬ ಅನೇಕ ಸಂಗತಿಗಳ ಬಗ್ಗೆ ರಮೇಶ್ ಉತ್ತರ ನೀಡಬೇಕಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ