Trending

ಸರ್ಕಾರಿ ನೌಕರರಿಗೆ ಜುಲೈನಲ್ಲಿ ಶೇ 5 ರಷ್ಟು ಡಿಎ ಹೆಚ್ಚಳ ?

ಈ ತಿಂಗಳ ಅಂತ್ಯದ ವೇಳೆಗೆ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ) ಹೆಚ್ಚಿಸುವ ಸಾಧ್ಯತೆಯಿದೆ.

DA Allowence

ಇದನ್ನು ಓದಿ -ಕಾಲ್ನಡಿಗೆಯಲ್ಲಿ ED ಕಚೇರಿಗೆ ತೆರಳಿದ ರಾಹುಲ್ ಗಾಂಧಿ

ಅಖಿಲ-ಭಾರತೀಯ ಗ್ರಾಹಕ ಬೆಲೆ ಸೂಚ್ಯಂಕ (ಎಐಸಿಪಿಐ) ಆಧಾರದ ಮೇಲೆ ಸರ್ಕಾರಿ ನೌಕರರ ಡಿಎಯನ್ನು ವರ್ಷಕ್ಕೆ ಎರಡು ಸಲ ಜನವರಿ ಮತ್ತು ಜುಲೈನಲ್ಲಿ ಪರಿಷ್ಕರಿಸಲಾಗುತ್ತದೆ.

ಈ ಬಾರಿ, ಎಐಸಿಪಿಐ 127 ಅಂಕಗಳ ಮೇಲಿದೆ, ಡಿಎ ಶೇ 5 ರಷ್ಟು ಹೆಚ್ಚಾಗಿ ಶೇಕಡ 39ಕ್ಕೆ ತಲುಪಬಹುದು

ಜನವರಿಯಲ್ಲಿ, 7 ನೇ ವೇತನ ಆಯೋಗದ ಅಡಿಯಲ್ಲಿ ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ ಹಿಂದಿನ ಶೇಕಡ 31 ರ ದರದಿಂದ ಶೇಕಡ 34 ಕ್ಕೆ ಏರಿಸಿತ್ತು.

ಏಪ್ರಿಲ್‌ನಲ್ಲಿ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿದ ಚಿಲ್ಲರೆ ಹಣದುಬ್ಬರವು ಎಂಟು ವರ್ಷಗಳ ಗರಿಷ್ಠ ಶೇಕಡಾ 7.79‌ ಕ್ಕೆ ತಲುಪಿದೆ. ಅದಕ್ಕೂ ಮೊದಲು, ಜುಲೈ 2021 ರಲ್ಲಿ, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕ್ರಮವಾಗಿ ಡಿಎ ಮತ್ತು ತುಟ್ಟಿಭತ್ಯೆ (ಡಿಆರ್) ಅನ್ನು ಕೇಂದ್ರವು ದೀರ್ಘ ವಿರಾಮದ ನಂತರ ಶೇಕಡ 17ರಿಂದ ಶೇಕಡ 28ಕ್ಕೆ ಹೆಚ್ಚಿಸಿತು.

2021ರ ಅಕ್ಟೋಬರ್ ನಲ್ಲಿ, ಕೇಂದ್ರ ಸರ್ಕಾರವು ಮತ್ತೊಮ್ಮೆ ಡಿಎಯನ್ನು ಶೇಕಡ 3 ಹೆಚ್ಚಿಸಿತು. ನಂತರ, 2021ರ ಜುಲೈನಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಡಿಎಯನ್ನು ಶೇಕಡ 31ಕ್ಕೆ ಏರಿಸಿತು. ಇದರ ಜತೆಗೆ, ಡಿಎ ಮಟ್ಟವನ್ನು ಆಧರಿಸಿ ನಿರ್ಧರಿಸುವ ಇತರ 4 ಭತ್ಯೆಗಳು ಸಹ ಹೆಚ್ಚಾಗಬಹುದು ಎನ್ನಲಾಗುತ್ತಿದೆ.

ಮೂಲ ವೇತನಕ್ಕೆ ಅನುಪಾತವಾಗಿ ಡಿಎ ಇರುತ್ತದೆ. ಮಾಸಿಕ ಭವಿಷ್ಯ ನಿಧಿ (ಪಿಎಫ್), ಗ್ರಾಚ್ಯುಟಿ ಮೊತ್ತ, ಎಚ್‌ಆರ್‌ಎ ಹೆಚ್ಚಳಕ್ಕೆ ಕೂಡ ಸರ್ಕಾರ ಚಿಂತನೆ ನಡೆಸಿದೆ.

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024